ಹನೂರು: ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು, ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್.ಶಿವಕುಮಾರ್ ತಿಳಿಸಿದರು.
ಈ ಕುರಿತು ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು.
ಇದನ್ನು ಓದಿ: ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ನ್ಯಾಯಾಲಯ
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳ ಜೊತೆ ಸಮಾಲೋಚಿಸಿ ಆದಷ್ಟು ಬೇಗ ನೀರಾವರಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಸಹ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರೈತ ಸಂಘದ ಪದಾಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಳ್ಳದೆ ಗೊಂದಲಕ್ಕೆ ಒಳಗಾಗದೆ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಮ್ಮ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕಸಭಾ ಸದಸ್ಯರು ಧರಣಿ ಸ್ಥಳಕ್ಕೆ ಬರಲಿಲ್ಲ ಎಂಬ ಒಂದೇ ಒಂದು ಕಾರಣ ಹೇಳಿ ದೂರು ನೀಡಿರುವುದು ಸರಿಯಲ್ಲ. ಅವರು ಸ್ಥಳಕ್ಕೆ ಬಾರದಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುವ ಬದಲು ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಏನು ಯೋಜನೆಗಳನ್ನು ರೂಪಿಸಿದ್ದಾರೆ, ಅಭಿವೃದ್ಧಿಗೆ ಪೂರಕವಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದರು.
ರೈತರ ಪರ ಸರ್ಕಾರ : ನಮ್ಮ ಕಾಂಗ್ರೆಸ್ ಸರ್ಕಾರ ರೈತ ಪರವಾದಂತಹ ಸರ್ಕಾರವಾಗಿದೆ. ರೈತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವಾಗಿದೆ. ಇದೀಗ ಕಲಾಪಗಳು ಆರಂಭವಾಗಿರುವುದರಿಂದ ಕಲಾಪಗಳು ಮುಗಿದ ಬಳಿಕ ನಿಮ್ಮಲ್ಲಿಗೆ ಸಂಸದರು ಆಗುತ್ತಿಲ್ಲ ಮಂತ್ರಿಗಳು ಬಂದು ಸಮಸ್ಯೆಗಳನ್ನು ಕೇಳಲಿದ್ದಾರೆ ಎಂದರು.
ಹಲವಾರು ವರ್ಷಗಳಿಂದ ಮಾಜಿ ಸಚಿವ ದಿ. ರಾಜುಗೌಡ, ಸಂಸದರಾದ ದಿ ಶ್ರೀನಿವಾಸ್ ಪ್ರಸಾದ್, ಆರ್ ಧ್ರುವ ನಾರಾಯಣ ಮಾಜಿ ಶಾಸಕರಾದ ಆರ್ ನರೇಂದ್ರ ರವರು ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿರುವುದರಿಂದ ಅನುದಾನದ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗಿದೆ. ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ರವರು ಸಭೆ ನಡೆಸಿ 25 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ಡಿಪಿಆರ್ ಸಿದ್ದಪಡಿಸಲು ಸೂಚನೆ ನೀಡಿದ್ದಾರೆ. ಇದಲ್ಲದೆ ಸರ್ವೆ ಕಾರ್ಯವು ಪ್ರಗತಿಯಲ್ಲಿರುವುದರಿಂದ ರೈತ ಮುಖಂಡರುಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…