ಚಾಮರಾಜನಗರ

ಯುವಕನ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ ಎಂಬವರ ಪುತ್ರ ನಂದೀಶ್ (27) ಮೃತಪಟ್ಟಯುವಕ. ಮೆಡಿಕಲ್ ರೆಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಶನಿವಾರ ಮೈಸೂರಿನಿಂದ ಆಗ ಮಿಸಿ ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಇಳಿಯುವಾಗ ಸಹ ಪ್ರಯಾಣಿಕರೊಂದಿಗೆ ಗಲಾಟೆಯಾಗಿದೆ. ಈ ವೇಳೆ ಮೂವರು ಹಲ್ಲೆ ನಡೆಸಿದ್ದು, ಅದಾದ ಬಳಿಕ ಕೆಲವರು ನಿಮ್ಮ ಪುತ್ರನ ಮೊಬೈಲ್ ಸಿಕ್ಕಿದೆ ಎಂದು ನಮ್ಮ ಮನೆಗೆ ತಲುಪಿಸಿದ್ದಾರೆ. ಅದಾದ ನಂತರ ಮರುದಿನ ಭಾನುವಾರ ಬೆಳಿಗ್ಗೆ ನನ್ನ ಪುತ್ರನ ಮೊಬೈಲ್‌ಗೆ ಕರೆ ಬಂದಿದ್ದು, ನಿಮ್ಮ ಪುತ್ರನ ಶವ ಬೆಂಗಳೂರಿನ ರೈಲು ಹಳಿಯ ಮೇಲೆ ಸಿಕ್ಕಿದೆ ಎಂದು ತಿಳಿಸಿದರು. ಇದು ಗಲಾಟೆ ಹಿನ್ನೆಲೆಯಲ್ಲಿ ನಡೆದ ಕೊಲೆ ಆಗಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಈ ನಡುವೆ ದೂರು ಕೊಡಲು ತೆರಳಿದ್ದಾಗ ಪೊಲೀಸ ರಿಂದ ಸೂಕ್ತ ಸ್ಪಂದನೆ ದೊರಕಲಿಲ್ಲ. ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನೂರಾರು ಮಂದಿ ಸೋಮವಾರ ಪೊಲೀಸ್ ಠಾಣೆ ಎದುರು ಪ್ರತಿ ಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮೃತನ ತಾಯಿ ದಾಕ್ಷಾಯಿಣಿ ಅವರ ಗೋಳಾಟ ಮನಕಲಕುವಂತಿತ್ತು.

ಪ್ರತಿಭಟನೆಯಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರನಂದೀಶ್, ರೈತ ಮುಖಂಡ ಮಧುವನಹಳ್ಳಿ ಬಸವರಾಜು, ವೀರಶೈವ ಮುಖಂಡ ದೊಡ್ಡಿಂದುವಾಡಿ ವೀರಭದ್ರ, ರೈತ ಮುಖಂಡ ಅಣಗಳ್ಳಿ ಬಸವರಾಜು, ಕರವೇ ಅಧ್ಯಕ್ಷ ಮತೀನ್, ಶಂಕನಪುರ ಜಗದೀಶ್, ಜಾಗತಿಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಿಂದು ಲೋಕೇಶ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಮಧುವಹಳ್ಳಿ ಬಾಲು, ನರೀಪುರ ಮಹೇಶ, ರುದ್ರಸ್ವಾಮಿ, ಮಾಲಂಗಿ ಬಸವರಾಜು, ಇಂದ್ರೇಶ್, ಸುಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ಡಿವೈಎಸ್‌ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಎಎಸ್‌ಪಿ ಉದೇಶ್ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

andolanait

Recent Posts

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

1 min ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

16 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

27 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

1 hour ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago