ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ ಎಂಬವರ ಪುತ್ರ ನಂದೀಶ್ (27) ಮೃತಪಟ್ಟಯುವಕ. ಮೆಡಿಕಲ್ ರೆಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಶನಿವಾರ ಮೈಸೂರಿನಿಂದ ಆಗ ಮಿಸಿ ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಸಹ ಪ್ರಯಾಣಿಕರೊಂದಿಗೆ ಗಲಾಟೆಯಾಗಿದೆ. ಈ ವೇಳೆ ಮೂವರು ಹಲ್ಲೆ ನಡೆಸಿದ್ದು, ಅದಾದ ಬಳಿಕ ಕೆಲವರು ನಿಮ್ಮ ಪುತ್ರನ ಮೊಬೈಲ್ ಸಿಕ್ಕಿದೆ ಎಂದು ನಮ್ಮ ಮನೆಗೆ ತಲುಪಿಸಿದ್ದಾರೆ. ಅದಾದ ನಂತರ ಮರುದಿನ ಭಾನುವಾರ ಬೆಳಿಗ್ಗೆ ನನ್ನ ಪುತ್ರನ ಮೊಬೈಲ್ಗೆ ಕರೆ ಬಂದಿದ್ದು, ನಿಮ್ಮ ಪುತ್ರನ ಶವ ಬೆಂಗಳೂರಿನ ರೈಲು ಹಳಿಯ ಮೇಲೆ ಸಿಕ್ಕಿದೆ ಎಂದು ತಿಳಿಸಿದರು. ಇದು ಗಲಾಟೆ ಹಿನ್ನೆಲೆಯಲ್ಲಿ ನಡೆದ ಕೊಲೆ ಆಗಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಈ ನಡುವೆ ದೂರು ಕೊಡಲು ತೆರಳಿದ್ದಾಗ ಪೊಲೀಸ ರಿಂದ ಸೂಕ್ತ ಸ್ಪಂದನೆ ದೊರಕಲಿಲ್ಲ. ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನೂರಾರು ಮಂದಿ ಸೋಮವಾರ ಪೊಲೀಸ್ ಠಾಣೆ ಎದುರು ಪ್ರತಿ ಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮೃತನ ತಾಯಿ ದಾಕ್ಷಾಯಿಣಿ ಅವರ ಗೋಳಾಟ ಮನಕಲಕುವಂತಿತ್ತು.
ಪ್ರತಿಭಟನೆಯಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರನಂದೀಶ್, ರೈತ ಮುಖಂಡ ಮಧುವನಹಳ್ಳಿ ಬಸವರಾಜು, ವೀರಶೈವ ಮುಖಂಡ ದೊಡ್ಡಿಂದುವಾಡಿ ವೀರಭದ್ರ, ರೈತ ಮುಖಂಡ ಅಣಗಳ್ಳಿ ಬಸವರಾಜು, ಕರವೇ ಅಧ್ಯಕ್ಷ ಮತೀನ್, ಶಂಕನಪುರ ಜಗದೀಶ್, ಜಾಗತಿಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಿಂದು ಲೋಕೇಶ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಮಧುವಹಳ್ಳಿ ಬಾಲು, ನರೀಪುರ ಮಹೇಶ, ರುದ್ರಸ್ವಾಮಿ, ಮಾಲಂಗಿ ಬಸವರಾಜು, ಇಂದ್ರೇಶ್, ಸುಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.
ಡಿವೈಎಸ್ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಎಎಸ್ಪಿ ಉದೇಶ್ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…