ಚಾಮರಾಜನಗರ

ಯುವಕನ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ ಎಂಬವರ ಪುತ್ರ ನಂದೀಶ್ (27) ಮೃತಪಟ್ಟಯುವಕ. ಮೆಡಿಕಲ್ ರೆಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಶನಿವಾರ ಮೈಸೂರಿನಿಂದ ಆಗ ಮಿಸಿ ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಇಳಿಯುವಾಗ ಸಹ ಪ್ರಯಾಣಿಕರೊಂದಿಗೆ ಗಲಾಟೆಯಾಗಿದೆ. ಈ ವೇಳೆ ಮೂವರು ಹಲ್ಲೆ ನಡೆಸಿದ್ದು, ಅದಾದ ಬಳಿಕ ಕೆಲವರು ನಿಮ್ಮ ಪುತ್ರನ ಮೊಬೈಲ್ ಸಿಕ್ಕಿದೆ ಎಂದು ನಮ್ಮ ಮನೆಗೆ ತಲುಪಿಸಿದ್ದಾರೆ. ಅದಾದ ನಂತರ ಮರುದಿನ ಭಾನುವಾರ ಬೆಳಿಗ್ಗೆ ನನ್ನ ಪುತ್ರನ ಮೊಬೈಲ್‌ಗೆ ಕರೆ ಬಂದಿದ್ದು, ನಿಮ್ಮ ಪುತ್ರನ ಶವ ಬೆಂಗಳೂರಿನ ರೈಲು ಹಳಿಯ ಮೇಲೆ ಸಿಕ್ಕಿದೆ ಎಂದು ತಿಳಿಸಿದರು. ಇದು ಗಲಾಟೆ ಹಿನ್ನೆಲೆಯಲ್ಲಿ ನಡೆದ ಕೊಲೆ ಆಗಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಈ ನಡುವೆ ದೂರು ಕೊಡಲು ತೆರಳಿದ್ದಾಗ ಪೊಲೀಸ ರಿಂದ ಸೂಕ್ತ ಸ್ಪಂದನೆ ದೊರಕಲಿಲ್ಲ. ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನೂರಾರು ಮಂದಿ ಸೋಮವಾರ ಪೊಲೀಸ್ ಠಾಣೆ ಎದುರು ಪ್ರತಿ ಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮೃತನ ತಾಯಿ ದಾಕ್ಷಾಯಿಣಿ ಅವರ ಗೋಳಾಟ ಮನಕಲಕುವಂತಿತ್ತು.

ಪ್ರತಿಭಟನೆಯಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರನಂದೀಶ್, ರೈತ ಮುಖಂಡ ಮಧುವನಹಳ್ಳಿ ಬಸವರಾಜು, ವೀರಶೈವ ಮುಖಂಡ ದೊಡ್ಡಿಂದುವಾಡಿ ವೀರಭದ್ರ, ರೈತ ಮುಖಂಡ ಅಣಗಳ್ಳಿ ಬಸವರಾಜು, ಕರವೇ ಅಧ್ಯಕ್ಷ ಮತೀನ್, ಶಂಕನಪುರ ಜಗದೀಶ್, ಜಾಗತಿಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಿಂದು ಲೋಕೇಶ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಮಧುವಹಳ್ಳಿ ಬಾಲು, ನರೀಪುರ ಮಹೇಶ, ರುದ್ರಸ್ವಾಮಿ, ಮಾಲಂಗಿ ಬಸವರಾಜು, ಇಂದ್ರೇಶ್, ಸುಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ಡಿವೈಎಸ್‌ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಎಎಸ್‌ಪಿ ಉದೇಶ್ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

andolanait

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

6 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

8 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

9 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

9 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

9 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

11 hours ago