ಚಾಮರಾಜನಗರ

ಯುವಕನ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ ಎಂಬವರ ಪುತ್ರ ನಂದೀಶ್ (27) ಮೃತಪಟ್ಟಯುವಕ. ಮೆಡಿಕಲ್ ರೆಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಶನಿವಾರ ಮೈಸೂರಿನಿಂದ ಆಗ ಮಿಸಿ ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಇಳಿಯುವಾಗ ಸಹ ಪ್ರಯಾಣಿಕರೊಂದಿಗೆ ಗಲಾಟೆಯಾಗಿದೆ. ಈ ವೇಳೆ ಮೂವರು ಹಲ್ಲೆ ನಡೆಸಿದ್ದು, ಅದಾದ ಬಳಿಕ ಕೆಲವರು ನಿಮ್ಮ ಪುತ್ರನ ಮೊಬೈಲ್ ಸಿಕ್ಕಿದೆ ಎಂದು ನಮ್ಮ ಮನೆಗೆ ತಲುಪಿಸಿದ್ದಾರೆ. ಅದಾದ ನಂತರ ಮರುದಿನ ಭಾನುವಾರ ಬೆಳಿಗ್ಗೆ ನನ್ನ ಪುತ್ರನ ಮೊಬೈಲ್‌ಗೆ ಕರೆ ಬಂದಿದ್ದು, ನಿಮ್ಮ ಪುತ್ರನ ಶವ ಬೆಂಗಳೂರಿನ ರೈಲು ಹಳಿಯ ಮೇಲೆ ಸಿಕ್ಕಿದೆ ಎಂದು ತಿಳಿಸಿದರು. ಇದು ಗಲಾಟೆ ಹಿನ್ನೆಲೆಯಲ್ಲಿ ನಡೆದ ಕೊಲೆ ಆಗಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಈ ನಡುವೆ ದೂರು ಕೊಡಲು ತೆರಳಿದ್ದಾಗ ಪೊಲೀಸ ರಿಂದ ಸೂಕ್ತ ಸ್ಪಂದನೆ ದೊರಕಲಿಲ್ಲ. ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನೂರಾರು ಮಂದಿ ಸೋಮವಾರ ಪೊಲೀಸ್ ಠಾಣೆ ಎದುರು ಪ್ರತಿ ಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮೃತನ ತಾಯಿ ದಾಕ್ಷಾಯಿಣಿ ಅವರ ಗೋಳಾಟ ಮನಕಲಕುವಂತಿತ್ತು.

ಪ್ರತಿಭಟನೆಯಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಮೂಡ್ಲುಪುರನಂದೀಶ್, ರೈತ ಮುಖಂಡ ಮಧುವನಹಳ್ಳಿ ಬಸವರಾಜು, ವೀರಶೈವ ಮುಖಂಡ ದೊಡ್ಡಿಂದುವಾಡಿ ವೀರಭದ್ರ, ರೈತ ಮುಖಂಡ ಅಣಗಳ್ಳಿ ಬಸವರಾಜು, ಕರವೇ ಅಧ್ಯಕ್ಷ ಮತೀನ್, ಶಂಕನಪುರ ಜಗದೀಶ್, ಜಾಗತಿಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಿಂದು ಲೋಕೇಶ್, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಮಧುವಹಳ್ಳಿ ಬಾಲು, ನರೀಪುರ ಮಹೇಶ, ರುದ್ರಸ್ವಾಮಿ, ಮಾಲಂಗಿ ಬಸವರಾಜು, ಇಂದ್ರೇಶ್, ಸುಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ಡಿವೈಎಸ್‌ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಎಎಸ್‌ಪಿ ಉದೇಶ್ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago