ಚಾಮರಾಜನಗರ

ಪಕ್ಷಾತೀತವಾದ ಬೆಂಬಲ ನನ್ನ ಮಗನಿಗೆ ಸಿಕ್ಕಿದೆ ಡಾ ಎಚ್ ಸಿ ಮಹದೇವಪ್ಪ !

ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹುಟ್ಟೂರು ಹದಿನಾರಿಗೆ ಪುತ್ರ ಸುನೀಲ್ ಬೋಸ್ ರೊಂದಿಗೆ ಆಗಮಿಸಿದ್ದ ಅವರು ಮತಗಟ್ಟೆಗೆ ತೆರಳುವ ಮೊದಲು ಆಂದೋಲನದೊಂದಿಗೆ ಮಾತನಾಡಿದರು,
ಈ ಬಾರಿ ಇಲ್ಲಿ ಕೈ ಗೆಲುವು ನಿಶ್ಚಿತ ಎಂದ ಅವರು, ಬಾರಿ ಅಂತರದಿಂದ ಇಲ್ಲಿ ನಾವು ಜಯಗಳಿಸುತ್ತೇವೆ.

ಚಾಮರಾಜನಗರ ಕೈ ನ ಭದ್ರಕೋಟೆಯಾಗಿ ಉಳಿದಿದೆ ಇದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೇಸ್ ಶಾಸಕರು ಹಾಗೂ ಮುಖಂಡರ ಪರಿಶ್ರಮವೂ ಕಾರಣ ಎಂದ ಮಹದೇವಪ್ಪ, ಬಿಜೆಪಿ ಸಂವಿಧಾನ ವಿರೊಧಿ ಆಡಳಿದಿಂದ ಜನತೆಗೆ ಭ್ರಮ ನಿರಸನವಾಗಿದೆ ಅಂತೆಯೇ ಕಾಂಗ್ರೇಸ್  ನೀಡಿದ ಬರವಸೆಗಳನ್ನು ಗ್ಯಾರಂಟಿಯಾಗಿ ಈಡೇರಿಸುತ್ತಿರುವ ಮೂಲಕ ಮತದಾರರ ಮನ ಸೇಳಿದಿದೆ ಎಂದು ಮಹದೇವಪ್ಪ ವ್ಯಾಖ್ಯಾನಿಸಿದರು.

ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ಗೆ ಸ್ಪರ್ಧೆ ಕಾಣುತ್ತಿಲ್ಲ ಮೈಸೂರಲ್ಲಿ ಮಾತ್ರ ನಮ್ಮ ಹಾಗೂ ಬಿಜೆಪಿ ನಡುವೆ ಗೆಲುವಿಗಾಗಿ ಹೋರಟವಿದ್ದು ಅಂತಿಮ ಜುಯ ನಮ್ಮದು ಎಂದು ಅವರು ತಿಳಿಸಿದರು.

ನಂಜನಗೂಡು ಸೇರಿದಂತೆ ಅನೇಕ ಕಡೆ ಬಿಜೆಪಿ ಮುಖಂಡರು ತೆರೆಮರೆಯಲ್ಲಿ ನಿಮ್ಮನ್ನು ಬೆಂಬಲಸಿದ್ದಾರಂತೆ ಎಂದಾಗ ಪ್ರತಿಕ್ರೀಯಿಸಿದ ಅವರು ಇರಬಹುದು ವಯಕ್ತಿಕ ಸ್ನೆಹವೂ ಕೆಲಸ ಮಾಡಿರಬಹುದು ಅದಕ್ಕಾಗಿ ವಿರೋಧ ಪಕ್ಷದ ಗೆಳೆಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾರ್ಮಿಕವಾಗಿ ನುಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

5 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago