ಚಾಮರಾಜನಗರ

ಪಕ್ಷಾತೀತವಾದ ಬೆಂಬಲ ನನ್ನ ಮಗನಿಗೆ ಸಿಕ್ಕಿದೆ ಡಾ ಎಚ್ ಸಿ ಮಹದೇವಪ್ಪ !

ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹುಟ್ಟೂರು ಹದಿನಾರಿಗೆ ಪುತ್ರ ಸುನೀಲ್ ಬೋಸ್ ರೊಂದಿಗೆ ಆಗಮಿಸಿದ್ದ ಅವರು ಮತಗಟ್ಟೆಗೆ ತೆರಳುವ ಮೊದಲು ಆಂದೋಲನದೊಂದಿಗೆ ಮಾತನಾಡಿದರು,
ಈ ಬಾರಿ ಇಲ್ಲಿ ಕೈ ಗೆಲುವು ನಿಶ್ಚಿತ ಎಂದ ಅವರು, ಬಾರಿ ಅಂತರದಿಂದ ಇಲ್ಲಿ ನಾವು ಜಯಗಳಿಸುತ್ತೇವೆ.

ಚಾಮರಾಜನಗರ ಕೈ ನ ಭದ್ರಕೋಟೆಯಾಗಿ ಉಳಿದಿದೆ ಇದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೇಸ್ ಶಾಸಕರು ಹಾಗೂ ಮುಖಂಡರ ಪರಿಶ್ರಮವೂ ಕಾರಣ ಎಂದ ಮಹದೇವಪ್ಪ, ಬಿಜೆಪಿ ಸಂವಿಧಾನ ವಿರೊಧಿ ಆಡಳಿದಿಂದ ಜನತೆಗೆ ಭ್ರಮ ನಿರಸನವಾಗಿದೆ ಅಂತೆಯೇ ಕಾಂಗ್ರೇಸ್  ನೀಡಿದ ಬರವಸೆಗಳನ್ನು ಗ್ಯಾರಂಟಿಯಾಗಿ ಈಡೇರಿಸುತ್ತಿರುವ ಮೂಲಕ ಮತದಾರರ ಮನ ಸೇಳಿದಿದೆ ಎಂದು ಮಹದೇವಪ್ಪ ವ್ಯಾಖ್ಯಾನಿಸಿದರು.

ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ಗೆ ಸ್ಪರ್ಧೆ ಕಾಣುತ್ತಿಲ್ಲ ಮೈಸೂರಲ್ಲಿ ಮಾತ್ರ ನಮ್ಮ ಹಾಗೂ ಬಿಜೆಪಿ ನಡುವೆ ಗೆಲುವಿಗಾಗಿ ಹೋರಟವಿದ್ದು ಅಂತಿಮ ಜುಯ ನಮ್ಮದು ಎಂದು ಅವರು ತಿಳಿಸಿದರು.

ನಂಜನಗೂಡು ಸೇರಿದಂತೆ ಅನೇಕ ಕಡೆ ಬಿಜೆಪಿ ಮುಖಂಡರು ತೆರೆಮರೆಯಲ್ಲಿ ನಿಮ್ಮನ್ನು ಬೆಂಬಲಸಿದ್ದಾರಂತೆ ಎಂದಾಗ ಪ್ರತಿಕ್ರೀಯಿಸಿದ ಅವರು ಇರಬಹುದು ವಯಕ್ತಿಕ ಸ್ನೆಹವೂ ಕೆಲಸ ಮಾಡಿರಬಹುದು ಅದಕ್ಕಾಗಿ ವಿರೋಧ ಪಕ್ಷದ ಗೆಳೆಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾರ್ಮಿಕವಾಗಿ ನುಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

41 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

2 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

3 hours ago