ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು.
ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹುಟ್ಟೂರು ಹದಿನಾರಿಗೆ ಪುತ್ರ ಸುನೀಲ್ ಬೋಸ್ ರೊಂದಿಗೆ ಆಗಮಿಸಿದ್ದ ಅವರು ಮತಗಟ್ಟೆಗೆ ತೆರಳುವ ಮೊದಲು ಆಂದೋಲನದೊಂದಿಗೆ ಮಾತನಾಡಿದರು,
ಈ ಬಾರಿ ಇಲ್ಲಿ ಕೈ ಗೆಲುವು ನಿಶ್ಚಿತ ಎಂದ ಅವರು, ಬಾರಿ ಅಂತರದಿಂದ ಇಲ್ಲಿ ನಾವು ಜಯಗಳಿಸುತ್ತೇವೆ.
ಚಾಮರಾಜನಗರ ಕೈ ನ ಭದ್ರಕೋಟೆಯಾಗಿ ಉಳಿದಿದೆ ಇದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೇಸ್ ಶಾಸಕರು ಹಾಗೂ ಮುಖಂಡರ ಪರಿಶ್ರಮವೂ ಕಾರಣ ಎಂದ ಮಹದೇವಪ್ಪ, ಬಿಜೆಪಿ ಸಂವಿಧಾನ ವಿರೊಧಿ ಆಡಳಿದಿಂದ ಜನತೆಗೆ ಭ್ರಮ ನಿರಸನವಾಗಿದೆ ಅಂತೆಯೇ ಕಾಂಗ್ರೇಸ್ ನೀಡಿದ ಬರವಸೆಗಳನ್ನು ಗ್ಯಾರಂಟಿಯಾಗಿ ಈಡೇರಿಸುತ್ತಿರುವ ಮೂಲಕ ಮತದಾರರ ಮನ ಸೇಳಿದಿದೆ ಎಂದು ಮಹದೇವಪ್ಪ ವ್ಯಾಖ್ಯಾನಿಸಿದರು.
ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ಗೆ ಸ್ಪರ್ಧೆ ಕಾಣುತ್ತಿಲ್ಲ ಮೈಸೂರಲ್ಲಿ ಮಾತ್ರ ನಮ್ಮ ಹಾಗೂ ಬಿಜೆಪಿ ನಡುವೆ ಗೆಲುವಿಗಾಗಿ ಹೋರಟವಿದ್ದು ಅಂತಿಮ ಜುಯ ನಮ್ಮದು ಎಂದು ಅವರು ತಿಳಿಸಿದರು.
ನಂಜನಗೂಡು ಸೇರಿದಂತೆ ಅನೇಕ ಕಡೆ ಬಿಜೆಪಿ ಮುಖಂಡರು ತೆರೆಮರೆಯಲ್ಲಿ ನಿಮ್ಮನ್ನು ಬೆಂಬಲಸಿದ್ದಾರಂತೆ ಎಂದಾಗ ಪ್ರತಿಕ್ರೀಯಿಸಿದ ಅವರು ಇರಬಹುದು ವಯಕ್ತಿಕ ಸ್ನೆಹವೂ ಕೆಲಸ ಮಾಡಿರಬಹುದು ಅದಕ್ಕಾಗಿ ವಿರೋಧ ಪಕ್ಷದ ಗೆಳೆಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾರ್ಮಿಕವಾಗಿ ನುಡಿದರು.
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ನಲ್ಲಿ…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…