ಚಾಮರಾಜನಗರ

ಪಕ್ಷಾತೀತವಾದ ಬೆಂಬಲ ನನ್ನ ಮಗನಿಗೆ ಸಿಕ್ಕಿದೆ ಡಾ ಎಚ್ ಸಿ ಮಹದೇವಪ್ಪ !

ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹುಟ್ಟೂರು ಹದಿನಾರಿಗೆ ಪುತ್ರ ಸುನೀಲ್ ಬೋಸ್ ರೊಂದಿಗೆ ಆಗಮಿಸಿದ್ದ ಅವರು ಮತಗಟ್ಟೆಗೆ ತೆರಳುವ ಮೊದಲು ಆಂದೋಲನದೊಂದಿಗೆ ಮಾತನಾಡಿದರು,
ಈ ಬಾರಿ ಇಲ್ಲಿ ಕೈ ಗೆಲುವು ನಿಶ್ಚಿತ ಎಂದ ಅವರು, ಬಾರಿ ಅಂತರದಿಂದ ಇಲ್ಲಿ ನಾವು ಜಯಗಳಿಸುತ್ತೇವೆ.

ಚಾಮರಾಜನಗರ ಕೈ ನ ಭದ್ರಕೋಟೆಯಾಗಿ ಉಳಿದಿದೆ ಇದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೇಸ್ ಶಾಸಕರು ಹಾಗೂ ಮುಖಂಡರ ಪರಿಶ್ರಮವೂ ಕಾರಣ ಎಂದ ಮಹದೇವಪ್ಪ, ಬಿಜೆಪಿ ಸಂವಿಧಾನ ವಿರೊಧಿ ಆಡಳಿದಿಂದ ಜನತೆಗೆ ಭ್ರಮ ನಿರಸನವಾಗಿದೆ ಅಂತೆಯೇ ಕಾಂಗ್ರೇಸ್  ನೀಡಿದ ಬರವಸೆಗಳನ್ನು ಗ್ಯಾರಂಟಿಯಾಗಿ ಈಡೇರಿಸುತ್ತಿರುವ ಮೂಲಕ ಮತದಾರರ ಮನ ಸೇಳಿದಿದೆ ಎಂದು ಮಹದೇವಪ್ಪ ವ್ಯಾಖ್ಯಾನಿಸಿದರು.

ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ಗೆ ಸ್ಪರ್ಧೆ ಕಾಣುತ್ತಿಲ್ಲ ಮೈಸೂರಲ್ಲಿ ಮಾತ್ರ ನಮ್ಮ ಹಾಗೂ ಬಿಜೆಪಿ ನಡುವೆ ಗೆಲುವಿಗಾಗಿ ಹೋರಟವಿದ್ದು ಅಂತಿಮ ಜುಯ ನಮ್ಮದು ಎಂದು ಅವರು ತಿಳಿಸಿದರು.

ನಂಜನಗೂಡು ಸೇರಿದಂತೆ ಅನೇಕ ಕಡೆ ಬಿಜೆಪಿ ಮುಖಂಡರು ತೆರೆಮರೆಯಲ್ಲಿ ನಿಮ್ಮನ್ನು ಬೆಂಬಲಸಿದ್ದಾರಂತೆ ಎಂದಾಗ ಪ್ರತಿಕ್ರೀಯಿಸಿದ ಅವರು ಇರಬಹುದು ವಯಕ್ತಿಕ ಸ್ನೆಹವೂ ಕೆಲಸ ಮಾಡಿರಬಹುದು ಅದಕ್ಕಾಗಿ ವಿರೋಧ ಪಕ್ಷದ ಗೆಳೆಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾರ್ಮಿಕವಾಗಿ ನುಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

4 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

6 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

9 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

9 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

10 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

10 hours ago