ಚಾಮರಾಜನಗರ

ಪಕ್ಷಾತೀತವಾದ ಬೆಂಬಲ ನನ್ನ ಮಗನಿಗೆ ಸಿಕ್ಕಿದೆ ಡಾ ಎಚ್ ಸಿ ಮಹದೇವಪ್ಪ !

ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹುಟ್ಟೂರು ಹದಿನಾರಿಗೆ ಪುತ್ರ ಸುನೀಲ್ ಬೋಸ್ ರೊಂದಿಗೆ ಆಗಮಿಸಿದ್ದ ಅವರು ಮತಗಟ್ಟೆಗೆ ತೆರಳುವ ಮೊದಲು ಆಂದೋಲನದೊಂದಿಗೆ ಮಾತನಾಡಿದರು,
ಈ ಬಾರಿ ಇಲ್ಲಿ ಕೈ ಗೆಲುವು ನಿಶ್ಚಿತ ಎಂದ ಅವರು, ಬಾರಿ ಅಂತರದಿಂದ ಇಲ್ಲಿ ನಾವು ಜಯಗಳಿಸುತ್ತೇವೆ.

ಚಾಮರಾಜನಗರ ಕೈ ನ ಭದ್ರಕೋಟೆಯಾಗಿ ಉಳಿದಿದೆ ಇದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೇಸ್ ಶಾಸಕರು ಹಾಗೂ ಮುಖಂಡರ ಪರಿಶ್ರಮವೂ ಕಾರಣ ಎಂದ ಮಹದೇವಪ್ಪ, ಬಿಜೆಪಿ ಸಂವಿಧಾನ ವಿರೊಧಿ ಆಡಳಿದಿಂದ ಜನತೆಗೆ ಭ್ರಮ ನಿರಸನವಾಗಿದೆ ಅಂತೆಯೇ ಕಾಂಗ್ರೇಸ್  ನೀಡಿದ ಬರವಸೆಗಳನ್ನು ಗ್ಯಾರಂಟಿಯಾಗಿ ಈಡೇರಿಸುತ್ತಿರುವ ಮೂಲಕ ಮತದಾರರ ಮನ ಸೇಳಿದಿದೆ ಎಂದು ಮಹದೇವಪ್ಪ ವ್ಯಾಖ್ಯಾನಿಸಿದರು.

ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ಗೆ ಸ್ಪರ್ಧೆ ಕಾಣುತ್ತಿಲ್ಲ ಮೈಸೂರಲ್ಲಿ ಮಾತ್ರ ನಮ್ಮ ಹಾಗೂ ಬಿಜೆಪಿ ನಡುವೆ ಗೆಲುವಿಗಾಗಿ ಹೋರಟವಿದ್ದು ಅಂತಿಮ ಜುಯ ನಮ್ಮದು ಎಂದು ಅವರು ತಿಳಿಸಿದರು.

ನಂಜನಗೂಡು ಸೇರಿದಂತೆ ಅನೇಕ ಕಡೆ ಬಿಜೆಪಿ ಮುಖಂಡರು ತೆರೆಮರೆಯಲ್ಲಿ ನಿಮ್ಮನ್ನು ಬೆಂಬಲಸಿದ್ದಾರಂತೆ ಎಂದಾಗ ಪ್ರತಿಕ್ರೀಯಿಸಿದ ಅವರು ಇರಬಹುದು ವಯಕ್ತಿಕ ಸ್ನೆಹವೂ ಕೆಲಸ ಮಾಡಿರಬಹುದು ಅದಕ್ಕಾಗಿ ವಿರೋಧ ಪಕ್ಷದ ಗೆಳೆಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾರ್ಮಿಕವಾಗಿ ನುಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago