ಚಾಮರಾಜನಗರ

ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ: ಸಚಿವ ಎಚ್.ಸಿ.ಮಹದೇವಪ್ಪ

ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ ತಪ್ಪು ಕೂಡ ಮಾಡಿಲ್ಲ. ಅವರು ಪ್ರಾಮಾಣಿಕ ರಾಜಕಾರಣಿ ಎಂದರು.

ಇನ್ನು ಜೆಡಿಎಸ್‌ ಹಾಗೂ ಬಿಜೆಪಿಯವರು ರಾಜಭವನವನ್ನು ರಾಜಕೀಯ ಅಂಗಳ ಮಾಡಿಕೊಂಡಿದ್ದಾರೆ. ಸಂವಿಧಾನ ಉಲ್ಲಂಘನೆ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯರ ಮೇಲೆ ಕಳಂಕ ತರಲು ಕೋಮುವಾದಿಗಳು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಡಾ ಪ್ರಕರಣದಲ್ಲಿ ಹಣಕಾಸಿನ ಅವ್ಯವಹಾರ ಆಗಿಲ್ಲ. ಸ್ವಜನ ಪಕ್ಷಪಾತ ಆಗಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪಿತೂರಿ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ತಂದು ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೇ ಬಿಜೆಪಿ ಹಾಗೂ ಜೆಡಿಎಸ್‌ನವರು ಪಿತೂರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

13 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

15 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

17 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

17 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

19 hours ago