ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ ತಪ್ಪು ಕೂಡ ಮಾಡಿಲ್ಲ. ಅವರು ಪ್ರಾಮಾಣಿಕ ರಾಜಕಾರಣಿ ಎಂದರು.
ಇನ್ನು ಜೆಡಿಎಸ್ ಹಾಗೂ ಬಿಜೆಪಿಯವರು ರಾಜಭವನವನ್ನು ರಾಜಕೀಯ ಅಂಗಳ ಮಾಡಿಕೊಂಡಿದ್ದಾರೆ. ಸಂವಿಧಾನ ಉಲ್ಲಂಘನೆ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯರ ಮೇಲೆ ಕಳಂಕ ತರಲು ಕೋಮುವಾದಿಗಳು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಡಾ ಪ್ರಕರಣದಲ್ಲಿ ಹಣಕಾಸಿನ ಅವ್ಯವಹಾರ ಆಗಿಲ್ಲ. ಸ್ವಜನ ಪಕ್ಷಪಾತ ಆಗಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಿತೂರಿ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ತಂದು ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೇ ಬಿಜೆಪಿ ಹಾಗೂ ಜೆಡಿಎಸ್ನವರು ಪಿತೂರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…