ಚಾಮರಾಜನಗರ

ಮೈಸೂರು ವಿವಿಗೆ ಚಾಮರಾಜನಗರ ವಿವಿಯನ್ನು ವಿಲೀನಗೊಳಿಸಿದರೆ ಪ್ರತಿಭಟನೆ ನಡೆಸಲಾಗುವುದು: ಎನ್‌.ಮಹೇಶ್‌

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿ ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಏಳು ಹೊಸ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು. ಅಲ್ಲದೇ ಅವುಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ವಿವಿ ಅಧ್ಯಯನ ಸಮಿತಿಯೂ ಈ ವಿಶ್ವ ವಿದ್ಯಾನಿಲಯಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು 342 ಕೋಟಿ ರೂ. ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಿರುವಾಗ ಸರ್ಕಾರ ಈ ಹೊಸ ವಿವಿಗಳನ್ನು ಮೂಲ ವಿವಿಗಳೊಂದಿಗೆ ಮತ್ತೆ ವಿಲೀನ ಮಾಡಲು ಹೊರಟಿರುವುದು ಖಂಡನೀಯವಾಗಿದೆ ಎಂದು ಹೇಳಿದರು.

ಸರ್ಕಾರ ಈ ಏಳು ಹೊಸ ವಿವಿಗಳಿಂದ ಹಣದ ಹೊರೆ ಹೆಚ್ಚಾಗಲಿದ್ದು, ಯಾವುದೇ ಯಾವುದೇ ಲಾಭವಿಲ್ಲ ಎನ್ನುವುದು ಸರಿಯಲ್ಲ. ಇದು ಶಿಕ್ಷಣ ಕೇಂದ್ರವೇ ಹೊರತು ಯಾವುದೇ ಕಂಪನಿ ಅಲ್ಲ. ಹೀಗಾಗಿ ಗ್ರಾಮೀಣ ಭಾಗದ ಮಕ್ಕಳ ಉನ್ನತ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಈ ವಿವಿಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಅಲ್ಲದೇ ಈ ವಿವಿಗಳ ಅಭಿವೃದ್ಧಿಗೆ ಪ್ರತಿ ವರ್ಷ 25 ಕೋಟಿ ರೂ. ಅನ್ನು ಹಂತ ಹಂತವಾಗಿ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಸರ್ಕಾರ ಈ ವಿವಿಗಳನ್ನು ಸ್ಥಾಪಿಸಿದ್ದು ಬಿಜೆಪಿ ಸರ್ಕಾರ. ನಾವೇಕೆ ಇವುಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂಬ ಮನೋಭಾವನೆಯಿಂದ ಇದೀಗ ವಿಲೀನಕ್ಕೆ ಹೊರಟಿದೆ. ಒಂದು ವೇಳೆ ಚಾಮರಾಜನಗರ ವಿವಿಯನ್ನು ಮೈಸೂರು ವಿವಿಗೆ ವಿಲೀನ ಮಾಡಲು ಮುಂದಾದರೆ ವಿದ್ಯಾರ್ಥಿಗಳೊಂದಿಗೆ ನಮ್ಮ ಪಕ್ಷವೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಚಾಮರಾಜನಗರ ವಿವಿಗೆ ಯುಜಿಸಿ ಅನುಮೋದನೆ ದೊರೆತಿದ್ದು, 2ಎಫ್‌ ಮಾನ್ಯತೆ ಸಹ ಲಭಿಸಿದೆ. 2023 ರಿಂದ ಇಲ್ಲಿಯವರೆಗೂ ಸ್ವದೇಶಿ ಮತ್ತು ವಿದೇಶಿ ಸೇರಿ 10ಕ್ಕೂ ಅಧಿಕ ವಿವಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಅಲ್ಲದೇ ಈ ವಿವಿ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ 7686 ವಿದ್ಯಾರ್ಥಿಗಳಿದ್ದಾರೆ. ಅವರುಗಳಲ್ಲಿ 4315 ಯುವತಿಯರೇ ಉನ್ನತ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಹೀಗಾಗಿ ಆ ಹೆಣ್ಣು ಮಕ್ಕಳ ಭವಿಷ್ಯವನ್ನು ರೂಪಿಸುವುದಕ್ಕಾದರೂ ಈ ವಿವಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದರು.

ಅರ್ಚನ ಎಸ್‌ ಎಸ್

Recent Posts

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

42 mins ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

1 hour ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

4 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

5 hours ago