ಚಾಮರಾಜನಗರ

ಮೈಸೂರು ವಿವಿಗೆ ಚಾಮರಾಜನಗರ ವಿವಿಯನ್ನು ವಿಲೀನಗೊಳಿಸಿದರೆ ಪ್ರತಿಭಟನೆ ನಡೆಸಲಾಗುವುದು: ಎನ್‌.ಮಹೇಶ್‌

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿ ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಏಳು ಹೊಸ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು. ಅಲ್ಲದೇ ಅವುಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ವಿವಿ ಅಧ್ಯಯನ ಸಮಿತಿಯೂ ಈ ವಿಶ್ವ ವಿದ್ಯಾನಿಲಯಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು 342 ಕೋಟಿ ರೂ. ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಿರುವಾಗ ಸರ್ಕಾರ ಈ ಹೊಸ ವಿವಿಗಳನ್ನು ಮೂಲ ವಿವಿಗಳೊಂದಿಗೆ ಮತ್ತೆ ವಿಲೀನ ಮಾಡಲು ಹೊರಟಿರುವುದು ಖಂಡನೀಯವಾಗಿದೆ ಎಂದು ಹೇಳಿದರು.

ಸರ್ಕಾರ ಈ ಏಳು ಹೊಸ ವಿವಿಗಳಿಂದ ಹಣದ ಹೊರೆ ಹೆಚ್ಚಾಗಲಿದ್ದು, ಯಾವುದೇ ಯಾವುದೇ ಲಾಭವಿಲ್ಲ ಎನ್ನುವುದು ಸರಿಯಲ್ಲ. ಇದು ಶಿಕ್ಷಣ ಕೇಂದ್ರವೇ ಹೊರತು ಯಾವುದೇ ಕಂಪನಿ ಅಲ್ಲ. ಹೀಗಾಗಿ ಗ್ರಾಮೀಣ ಭಾಗದ ಮಕ್ಕಳ ಉನ್ನತ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಈ ವಿವಿಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಅಲ್ಲದೇ ಈ ವಿವಿಗಳ ಅಭಿವೃದ್ಧಿಗೆ ಪ್ರತಿ ವರ್ಷ 25 ಕೋಟಿ ರೂ. ಅನ್ನು ಹಂತ ಹಂತವಾಗಿ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಸರ್ಕಾರ ಈ ವಿವಿಗಳನ್ನು ಸ್ಥಾಪಿಸಿದ್ದು ಬಿಜೆಪಿ ಸರ್ಕಾರ. ನಾವೇಕೆ ಇವುಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂಬ ಮನೋಭಾವನೆಯಿಂದ ಇದೀಗ ವಿಲೀನಕ್ಕೆ ಹೊರಟಿದೆ. ಒಂದು ವೇಳೆ ಚಾಮರಾಜನಗರ ವಿವಿಯನ್ನು ಮೈಸೂರು ವಿವಿಗೆ ವಿಲೀನ ಮಾಡಲು ಮುಂದಾದರೆ ವಿದ್ಯಾರ್ಥಿಗಳೊಂದಿಗೆ ನಮ್ಮ ಪಕ್ಷವೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಚಾಮರಾಜನಗರ ವಿವಿಗೆ ಯುಜಿಸಿ ಅನುಮೋದನೆ ದೊರೆತಿದ್ದು, 2ಎಫ್‌ ಮಾನ್ಯತೆ ಸಹ ಲಭಿಸಿದೆ. 2023 ರಿಂದ ಇಲ್ಲಿಯವರೆಗೂ ಸ್ವದೇಶಿ ಮತ್ತು ವಿದೇಶಿ ಸೇರಿ 10ಕ್ಕೂ ಅಧಿಕ ವಿವಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಅಲ್ಲದೇ ಈ ವಿವಿ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ 7686 ವಿದ್ಯಾರ್ಥಿಗಳಿದ್ದಾರೆ. ಅವರುಗಳಲ್ಲಿ 4315 ಯುವತಿಯರೇ ಉನ್ನತ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಹೀಗಾಗಿ ಆ ಹೆಣ್ಣು ಮಕ್ಕಳ ಭವಿಷ್ಯವನ್ನು ರೂಪಿಸುವುದಕ್ಕಾದರೂ ಈ ವಿವಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

54 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

55 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

57 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

60 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

1 hour ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

1 hour ago