Nada bomb blast Cow's face shattered
ಹನೂರು: ಜಮೀನುಗಳಲ್ಲಿ ಮೇವಿನ ನಡುವೆ ನಾಡ ಬಾಂಬ್ ಇಟ್ಟು ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಪ್ರಕರಣ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ಮತ್ತೆ ಸದ್ದು ಮಾಡುತ್ತಿದ್ದು, ನಾಡ ಬಾಂಬ್ ಸ್ಫೋಟಕ್ಕೆ ಒಂದು ಹಸುವಿನ ಮುಖ ಛಿದ್ರವಾಗಿರುವ ಘಟನೆ ಹನೂರು ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕ್ಯಾಂಪ್ ಸಮೀಪ ಜರುಗಿದೆ.
ಹನೂರು ತಾಲ್ಲೂಕಿನ ಬೂದಬಾಳು, ಹನೂರು ಪಟ್ಟಣ, ಆರ್.ಎಸ್ ದೊಡ್ಡಿ, ಕುರಟ್ಟಿ ಹೊಸೂರು, ಕೌದಳ್ಳಿ ಗ್ರಾಮದ ಎರಡು ಕಡೆ ನಾಡ ಬಾಂಬ್ ಇಟ್ಟು ಸುಮಾರು ಹತ್ತಕ್ಕೂ ಹೆಚ್ಚು ಹಸುಗಳ ಮುಖ ಛಿದ್ರವಾಗಿತ್ತು.
ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ನಾಡ ಬಾಂಬ್ ಇಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರ ಸುಮಾರು ಮೂರು ತಿಂಗಳುಗಳ ಕಾಲ ಯಾವುದೇ ಸಿಡಿಮದ್ದು ಪ್ರಕರಣಗಳು ಪತ್ತೆಯಾಗಿರಲಿಲ್ಲ.
ಇದೀಗ ವಿ.ಎಸ್.ದೊಡ್ಡಿ ಗ್ರಾಮದ ಮಂಟೇಸ್ವಾಮಿ ಎಂಬುವವರಿಗೆ ಸೇರಿದ ಹಸುಗಳು ಟಿಬೆಟಿಯನ್ ಕ್ಯಾಂಪ್ ಸಮೀಪದ ಎನ್.ವಿಲೇಜ್ ಗ್ರಾಮದ ಖಾಲಿ ನಿವೇಶನದಲ್ಲಿ ಮೇವು ಮೇಯುತ್ತಿದ್ದವು. ಈ ವೇಳೆ ಒಂದು ಹಸು ಕಿಡಿಗೇಡಿಗಳು ಇಟ್ಟಿದ್ದ ನಾಡ ಬಾಂಬ್ ಜಿಗಿದ ಪರಿಣಾಮ ಅದರ ಮುಖ ಛಿದ್ರವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಡಬಾಂಬ್ ಇಟ್ಟಿದ್ದ ಕಿಡಿಗೇಡಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…