Nada bomb blast Cow's face shattered
ಹನೂರು: ಜಮೀನುಗಳಲ್ಲಿ ಮೇವಿನ ನಡುವೆ ನಾಡ ಬಾಂಬ್ ಇಟ್ಟು ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಪ್ರಕರಣ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ಮತ್ತೆ ಸದ್ದು ಮಾಡುತ್ತಿದ್ದು, ನಾಡ ಬಾಂಬ್ ಸ್ಫೋಟಕ್ಕೆ ಒಂದು ಹಸುವಿನ ಮುಖ ಛಿದ್ರವಾಗಿರುವ ಘಟನೆ ಹನೂರು ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕ್ಯಾಂಪ್ ಸಮೀಪ ಜರುಗಿದೆ.
ಹನೂರು ತಾಲ್ಲೂಕಿನ ಬೂದಬಾಳು, ಹನೂರು ಪಟ್ಟಣ, ಆರ್.ಎಸ್ ದೊಡ್ಡಿ, ಕುರಟ್ಟಿ ಹೊಸೂರು, ಕೌದಳ್ಳಿ ಗ್ರಾಮದ ಎರಡು ಕಡೆ ನಾಡ ಬಾಂಬ್ ಇಟ್ಟು ಸುಮಾರು ಹತ್ತಕ್ಕೂ ಹೆಚ್ಚು ಹಸುಗಳ ಮುಖ ಛಿದ್ರವಾಗಿತ್ತು.
ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ನಾಡ ಬಾಂಬ್ ಇಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರ ಸುಮಾರು ಮೂರು ತಿಂಗಳುಗಳ ಕಾಲ ಯಾವುದೇ ಸಿಡಿಮದ್ದು ಪ್ರಕರಣಗಳು ಪತ್ತೆಯಾಗಿರಲಿಲ್ಲ.
ಇದೀಗ ವಿ.ಎಸ್.ದೊಡ್ಡಿ ಗ್ರಾಮದ ಮಂಟೇಸ್ವಾಮಿ ಎಂಬುವವರಿಗೆ ಸೇರಿದ ಹಸುಗಳು ಟಿಬೆಟಿಯನ್ ಕ್ಯಾಂಪ್ ಸಮೀಪದ ಎನ್.ವಿಲೇಜ್ ಗ್ರಾಮದ ಖಾಲಿ ನಿವೇಶನದಲ್ಲಿ ಮೇವು ಮೇಯುತ್ತಿದ್ದವು. ಈ ವೇಳೆ ಒಂದು ಹಸು ಕಿಡಿಗೇಡಿಗಳು ಇಟ್ಟಿದ್ದ ನಾಡ ಬಾಂಬ್ ಜಿಗಿದ ಪರಿಣಾಮ ಅದರ ಮುಖ ಛಿದ್ರವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಡಬಾಂಬ್ ಇಟ್ಟಿದ್ದ ಕಿಡಿಗೇಡಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…