ಚಾಮರಾಜನಗರ

ಪ್ರಸಿದ್ಧ ಯಾತ್ರಾಸ್ಥಳ ನಾಗಮಲೆಗೂ ಚಾರಣಿಗರಿಗೆ ನಿಷೇಧ

ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ  ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜನರ ಬದುಕು ಶೋಚನೀಯ ಹಂತಕ್ಕೆ ಬಂದು ತಲುಪಿದೆ.

ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ನಾಗಮಲೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಮಲೆ ಮಹದೇಶ್ವರ ಬೆಟ್ಟ ಕೂಡ ಒಂದು. ಬೆಟ್ಟಕ್ಕೆ ಬರುವ ಭಕ್ತಾದಿಗಳೆಲ್ಲಾ ನಾಗಮಲೆಗೂ ಸಹ ಹೋಗುತ್ತಿದ್ದರು. ಇತ್ತೀಚೆಗೆ ಅರಣ್ಯ ಇಲಾಖೆ ಚಾರಣಕ್ಕೆ ನಿಷೇಧ ಕಾಯ್ದೆ ಜಾರಿಗೆ ತಂದು ಇಲ್ಲಿನ ಚಾರಣಿಗರಿಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಚಾರಣಿಗರಿಗೆ ತೀವ್ರ ನಿರಾಸೆ ಉಂಟಾಗಿದ್ದು, ಅರಣ್ಯ ಇಲಾಖೆ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ನಾಗಮಲೆಗೆ ನಿಷೇಧ ಹೇರಿರುವುದರಿಂದ ಇಲ್ಲಿನ ಜನತೆಗೆ ವ್ಯಾಪಾರ ವಹಿವಾಟು ಇಲ್ಲದೇ ಇತ್ತ ಕೂಲಿಯೂ ಇಲ್ಲದೇ ಕಂಗಾಲಾಗಿದ್ದಾರೆ.

ಅನಾದಿಕಾಲದಿಂದಲೂ ಸಹ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡದೇ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಹೀಗಾಗಿ ಇಲ್ಲಿನ ಜನತೆ ಯಾವುದೇ ಕೆಲಸ ಕಾರ್ಯಗಳಿಲ್ಲದೇ ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನಮಗೆ ಕೆಲಸ ಕೊಡಿ, ಇಲ್ಲವೇ ನಾಗಮಲೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವಂತೆ ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

1 hour ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

1 hour ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

1 hour ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

1 hour ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

2 hours ago