ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜನರ ಬದುಕು ಶೋಚನೀಯ ಹಂತಕ್ಕೆ ಬಂದು ತಲುಪಿದೆ.
ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ನಾಗಮಲೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುವ ಸ್ಥಳದಲ್ಲಿ ಮಲೆ ಮಹದೇಶ್ವರ ಬೆಟ್ಟ ಕೂಡ ಒಂದು. ಬೆಟ್ಟಕ್ಕೆ ಬರುವ ಭಕ್ತಾದಿಗಳೆಲ್ಲಾ ನಾಗಮಲೆಗೂ ಸಹ ಹೋಗುತ್ತಿದ್ದರು. ಇತ್ತೀಚೆಗೆ ಅರಣ್ಯ ಇಲಾಖೆ ಚಾರಣಕ್ಕೆ ನಿಷೇಧ ಕಾಯ್ದೆ ಜಾರಿಗೆ ತಂದು ಇಲ್ಲಿನ ಚಾರಣಿಗರಿಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಚಾರಣಿಗರಿಗೆ ತೀವ್ರ ನಿರಾಸೆ ಉಂಟಾಗಿದ್ದು, ಅರಣ್ಯ ಇಲಾಖೆ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ನಾಗಮಲೆಗೆ ನಿಷೇಧ ಹೇರಿರುವುದರಿಂದ ಇಲ್ಲಿನ ಜನತೆಗೆ ವ್ಯಾಪಾರ ವಹಿವಾಟು ಇಲ್ಲದೇ ಇತ್ತ ಕೂಲಿಯೂ ಇಲ್ಲದೇ ಕಂಗಾಲಾಗಿದ್ದಾರೆ.
ಅನಾದಿಕಾಲದಿಂದಲೂ ಸಹ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡದೇ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಹೀಗಾಗಿ ಇಲ್ಲಿನ ಜನತೆ ಯಾವುದೇ ಕೆಲಸ ಕಾರ್ಯಗಳಿಲ್ಲದೇ ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನಮಗೆ ಕೆಲಸ ಕೊಡಿ, ಇಲ್ಲವೇ ನಾಗಮಲೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವಂತೆ ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…