ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ ಹೆಸರನ್ನು ಗುಂಡ್ಲುಪೇಟೆ ಪಟ್ಟಣದ ಯಾವುದಾದರೂ ಪ್ರಮುಖ ರಸ್ತೆಗೆ ಇಡಬೇಕು ಹಾಗೂ ನಾಗರತ್ನಮ್ಮ ಅವರ ಪುತ್ಥಳಿ ನಿರ್ಮಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಲ್ ನಾಗರಾಜು ಒತ್ತಾಯಿಸಿದರು.
ಈ ಕುರಿತು ಆಂದೋಲನದೊಂದಿಗೆ ಮಾತನಾಡಿದ ಅವರು, ನಾನು ಈ ವಿಚಾರವಾಗಿ ಕಳೆದ ಒಂದು ವರ್ಷದ ಹಿಂದೆಯೇ ಪುರಸಭೆ ಮುಖ್ಯಾಧಿಕಾರಿಯವರಿಗೆ ಒತ್ತಾಯಿಸಿದ್ದೆ, ಆದರೆ ಹೆಸರಿಟ್ಟರು ಪುತ್ಥಳಿ ನಿರ್ಮಾಣ ಮಾಡಲು ರಾಜಕಾರಣಿಗಳ ಕೇಳಬೇಕು ಎಂಬ ಉಡಾಪೆ ಉತ್ತರ ನೀಡಿದ್ದರು. ಮುಂದಿನ ದಿನಗಳಲ್ಲಿ ರಸ್ತೆಗೆ ಅವರ ಹೆಸರಿಟ್ಟು ಪುತ್ಥಳಿ ನಿರ್ಮಿಸದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಗುಂಡ್ಲುಪೇಟೆ ಗಡಿ ಭಾಗದಲ್ಲಿ ಪರಭಾಷಿಕರ ಹಾವಳಿ ಹೆಚ್ಚಿದ್ದು, ನಮ್ಮ ಗುಂಡ್ಲುಪೇಟೆ ತಾಲ್ಲೂಕಿನ ರೈತರು ಜಮೀನು ಮಾರಿಕೊಳ್ಳಬಾರದು, ಗುಂಡ್ಲುಪೇಟೆ ರಸ್ತೆಗಳಲ್ಲಿ ಮಲೆಯಾಳಿ ನಾಮಫಲಕಗಳೆ ಹೆಚ್ಚಿದ್ದು ಬೇಕರಿ, ಅಂಗಡಿ, ಹೋಂ ಸ್ಟೇ, ಕೇರಳಿಗರದೆ ಹೆಚ್ಚಿದ್ದು ಇದರ ವಿರುದ್ದ ಕೆಲವೇ ದಿನಗಳಲ್ಲಿ ಚಳುವಳಿ ನಡೆಸಲಾಗುವುದು ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…