ಚಾಮರಾಜನಗರ

ವಿ.ವಿಗೆ ಅಂಬೇಡ್ಕರ್‌ ಹೆಸರು : ಹೆಚ್ಚಿದ ಕೂಗು

ಚಾಮರಾಜನಗರ : ನಗರದ ಹೊರವಲಯದ ಯಡಪುರದಲ್ಲಿ ಉದ್ಘಾಟನೆಗೊಂಡಿರುವ ಜಿಲ್ಲೆಯ ಹೊಸ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರು ಇಡಬೇಕು ಎಂಬ ಕೂಗು ಕೇಳಿ ಬಂದಿದೆ.ಮೈಸೂರು ವಿವಿಯ ಅಧೀನದಲ್ಲಿದ್ದ ಸ್ನಾತಕೋತ್ತರ ಕೇಂದ್ರಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರು ಇಡಲಾಗಿತ್ತು. ಅದೇ ಹೆಸರನ್ನು ಹೊಸ ವಿವಿಗೂ ಇಡಬೇಕಿತ್ತು. ಉನ್ನತ ಶಿಕ್ಷಣ ಇಲಾಖೆ ಹೊಸ ವಿವಿ ಸ್ಥಾಪನೆ ಮಾಡುವಾಗ ಹೊರಡಿಸಿದ ಆದೇಶದಲ್ಲಿ ಅಂಬೇಡ್ಕರ್‌ ಹೆಸರು ಉಳಿಸದೇ ಇದ್ದುದಕ್ಕೆ ಸಾಹಿತಿಗಳು, ದಲಿತ ಸಮುದಾದಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಆಗಿರುವ ತಪ್ಪನ್ನು ತಿದ್ದಿ, ವಿವಿಗೆ ಡಾ.ಬಿ.ಆರ್.ಅಂಬೇಡ್ಕರ್‌ ಹೆಸರನ್ನು ಇಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ‌.
ಜಿಲ್ಲೆಯ ಮಕ್ಕಳಿಗೆ ಇಲ್ಲಿಯೇ ಸ್ನಾತಕೋತ್ತರ ಪದವಿ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ 2010ರಲ್ಲಿ ಮೈಸೂರು ವಿವಿಯ ಸ್ನಾತಕೋತ್ತರ ಕೇಂದ್ರವನ್ನು ನಗರದಲ್ಲಿ ಸ್ಥಾಪಿಸಲಾಗಿತ್ತು.
ರೇಷ್ಮೆ ಇಲಾಖೆಯ ಕಟ್ಟಡದಲ್ಲಿ ಮೂರು ಕೋರ್ಸ್‌ಗಳು ಹಾಗೂ 90 ಮಕ್ಕಳೊಂದಿಗೆ ಕೇಂದ್ರ ಆರಂಭವಾಗಿತ್ತು. ನಂತರ ₹20 ಕೋಟಿ ವೆಚ್ಚದಲ್ಲಿ ಯಡಪುರದಲ್ಲಿ ಕೇಂದ್ರಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿತ್ತು. 2017ರ ಡಿಸೆಂಬರ್‌ 30ರಂದು ಉದ್ಘಾಟಿಸಲಾಗಿತ್ತು. ಜಿಲ್ಲೆಯಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭವಾದಾಗಲೇ, ಅದಕ್ಕೆ ಅಂಬೇಡ್ಕರ್‌ ಅವರ ಹೆಸರು ಇಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಜನ ಪ್ರತಿನಿಧಿತಿಗಳು, ಪ್ರಗತಿಪರ ಸಂಘಟನೆಗಳು ಅಂಬೇಡ್ಕರ್‌ ಹೆಸರು ಇಡುವುದಕ್ಕೆ ಪರವಾಗಿದ್ದರು.2015ರ ಮೈಸೂರು ಸಿಂಡಿಕೇಟ್‌ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಆಗ ಪ್ರೊ.ರಂಗಪ್ಪ ಕುಲಪತಿ ಆಗಿದ್ದರು. ಆ ತೀರ್ಮಾನದಂತೆ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರ ಎಂದು ಹೆಸರಿಡಲಾಗಿತ್ತು.

‘ಹೊಸ ವಿವಿ ಘೋಷಣೆ ಮಾಡುವಾಗ ಸರ್ಕಾರ ಅಂಬೇಡ್ಕರ್‌ ಹೆಸರನ್ನು ಉಳಿಸಿಕೊಳ್ಳಬೇಕಿತ್ತು. ಆದರೆ, ಅದನ್ನು ಕೈಬಿಟ್ಟು ಸುವರ್ಣಗಂಗೋತ್ರಿ ಎಂಬುದನ್ನು ಉಳಿಸಿಕೊಂಡಿದೆ. ಎರಡು ದಿನಗಳ ಹಿಂದೆ ಅನಾವರಣಗೊಂಡ ಶಿಲಾಫಲಕದಲ್ಲಿ ಸುವರ್ಣ ಗಂಗೋತ್ರಿ ಎಂಬ ಉಲ್ಲೇಖ ಇದೆ. ಅದು ಅಧಿಕೃತವಾಗಿ ಇಟ್ಟ ಹೆಸರಲ್ಲ’ ಎಂದು ಸಾಹಿತಿ ಸೋಮಶೇಖರ ಬಿಸಲವಾಡಿ ತಿಳಿಸಿದರು.

‘ಬೇರೆ ಬೇರೆ ಜಿಲ್ಲೆಗಳಲ್ಲಿ ವಿವಿ ಸ್ಥಾಪನೆ ಮಾಡುವಾಗ ಆ ಜಿಲ್ಲೆಯ ಹೆಸರನ್ನೇ ಸರ್ಕಾರ ಉಲ್ಲೇಖಿಸಿದೆ. ಹಿಂದೆ ಇದ್ದ ಹೆಸರುಗಳನ್ನು ಗಮನಿಸಿಲ್ಲ ಎಂದು ಕಾಣುತ್ತದೆ. ಅದರ ಬಗ್ಗೆ ಗಮನ ಹರಿಸಬೇಕಿತ್ತು. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು, ನಮ್ಮ ಹೊಸ ವಿವಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಿವಿ ಎಂದು ಹೆಸರು ಇಡಬೇಕು’ ಎಂದು ಅವರು ಒತ್ತಾಯಿಸಿದರು.

ಸರ್ಕಾರದ ತೀರ್ಮಾನ ಅಗತ್ಯ : ಈ ಬಗ್ಗೆ ಪ್ರತಿಕ್ರಿಯಿಸಿದ ವಿವಿ ಕುಲಪತಿ ಡಾ.ಎಂ.ಆರ್‌.ಗಂಗಾಧರ್‌, ‘ಅಂಬೇಡ್ಕರ್‌ ಹೆಸರು ಇಡಬೇಕು ಎಂಬ ಒತ್ತಾಯದ ಬಗ್ಗೆ ಗಮನಕ್ಕೆ ಬಂದಿದೆ. ಜಿಲ್ಲಾವಾರು ವಿವಿ ಸ್ಥಾಪಿಸುವಾಗ ಆಯಾ ಜಿಲ್ಲೆಯ ಹೆಸರಿನಿಂದ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಮರುನಾಮಕಣ ಮಾಡುವುದಕ್ಕೆ ಅವಕಾಶ ಇದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಬೇಕಿದೆ’ ಎಂದರು.

ಹೋರಾಟದ ಎಚ್ಚರಿಕೆ : ಈ ಸಂಬಂಧ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿರುವ ಸೋಮಶೇಖರ ಬಿಸಲವಾಡಿ ಅವರು, ‘ಈಗಾಗಲೇ ಬಹಳಷ್ಟು ವಿಶ್ವವಿದ್ಯಾಲಯಗಳು ಮಹಾನ್ ವ್ಯಕ್ತಿಗಳು ಮತ್ತು ಸಾಧಕರ ಹೆಸರಿನಲ್ಲಿ ಸ್ಥಾಪನೆಯಾಗಿವೆ. ಅದರಂತೆ ಚಾಮರಾಜನಗರ ವಿಶ್ವವಿದ್ಯಾನಿಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡಬೇಕು. ಉನ್ನತ ಶಿಕ್ಷಣ ಇಲಾಖೆ ಈ ಬಗ್ಗೆ ಗಮನಹರಿಸಬೇಕು. ಸತತ ಏಳು ವರ್ಷಗಳಿಂದಲೂ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಎಂದೇ ಎಲ್ಲ ದಾಖಲೆಗಳಲ್ಲಿಯೂ ನಮೂದಾಗಿದೆ’ ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ಮಾತನಾಡಿ, ‘ಚುನಾವಣೆ ವೇಳೆಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಮಾಡುವುದು ಬೇಡ. ನಾವು ನ್ಯಾಯಯುತವಾಗಿ ಸರ್ಕಾರದಲ್ಲಿ ಮನವಿ ಮಾಡುತ್ತೇವೆ. ನೂತನ ವಿವಿಗೆ ಅಂಬೇಡ್ಕರ್ ಹೆಸರನ್ನು ಇಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದರು.

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

5 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

7 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

8 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

9 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

11 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago