ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು.
ಗ್ರಾಮದ ಆನೆಮಡುವಿನ ಕೆರೆಯ 5 ಕಿಮೀ ವ್ಯಾಪ್ತಿಯಲ್ಲಿ 5 ಹುಲಿಗಳ ಚಲನವಲನ ನಾಲ್ಕೈದು ದಿನಗಳಿಂದ ಕಂಡು ಬಾರದ ಕಾರಣ ಆನೆಗಳನ್ನು ಶಿಬಿರಕ್ಕೆ ಕಳುಹಿಸಿದ್ದಾರೆ. ಗ್ರಾಮದ ಕುಮಾರಸ್ವಾಮಿ ಎಂಬವರ ತೋಟದ ಕಡೆಯಿಂದ ತಮ್ಮಡಹಳ್ಳಿಗೆ ಹೋಗುವ ದಾರಿಯಲ್ಲಿ 4 ಮರಿಗಳ ಜೊತೆ ತಾಯಿ ಹುಲಿ ಇರುವ ದೃಶ್ಯಸಿಸಿ ಕ್ಯಾಮೆರಾ ದಲ್ಲಿ ಡಿ.19ರಂದು ಸೆರೆಯಾಗಿತ್ತು. ಇವುಗಳ ಸೆರೆ ಕಾರ್ಯಾಚರಣೆಗೆ ಮೊದಲಿಗೆ ಎರಡು, ನಂತರ ಮೂರು ಆನೆಗಳನ್ನು ಕರೆತಂದು ವಾರದ ಮೇಲಾಗಿತ್ತು. ಗುರುವಾರ ಬೆಳಿಗ್ಗೆ ಮಾವುತರು ,ಕಾವಾಡಿಗರು ಆನೆಗಳೊಂದಿಗೆ ಶಿಬಿರಕ್ಕೆ ಹಿಂದಿರುಗಿದರು.
ಕಾರ್ಯಾಚರಣೆ ಸ್ಥಳದಲ್ಲಿ ವಾಕ್ ಥ್ರೋ ಕೇಜ್, ತುಮಕೂರು ಬೋನು ಮತ್ತು ಸಾಮಾನ್ಯ ಬೋನುಗಳು ಹಾಗೆಯೇ ಇವೆ. ಏನಾದರೂ ಈ ಭಾಗದಲ್ಲಿ ಮತ್ತೆ ಐದು ಹುಲಿಗಳ ಚಲನವಲನ ಕಂಡುಬಂದರೆ ಬಂಡೀಪುರ ಅಥವಾ ನಾಗರಹೊಳೆಯ ತಿಥಿ ಮತಿ ಶಿಬಿರದಿಂದ ಸಾಕಾನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…