ಚಾಮರಾಜನಗರ

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು.

ಗ್ರಾಮದ ಆನೆಮಡುವಿನ ಕೆರೆಯ 5 ಕಿಮೀ ವ್ಯಾಪ್ತಿಯಲ್ಲಿ 5 ಹುಲಿಗಳ ಚಲನವಲನ ನಾಲ್ಕೈದು ದಿನಗಳಿಂದ ಕಂಡು ಬಾರದ ಕಾರಣ ಆನೆಗಳನ್ನು ಶಿಬಿರಕ್ಕೆ ಕಳುಹಿಸಿದ್ದಾರೆ.  ಗ್ರಾಮದ ಕುಮಾರಸ್ವಾಮಿ ಎಂಬವರ ತೋಟದ ಕಡೆಯಿಂದ ತಮ್ಮಡಹಳ್ಳಿಗೆ ಹೋಗುವ ದಾರಿಯಲ್ಲಿ 4 ಮರಿಗಳ ಜೊತೆ ತಾಯಿ ಹುಲಿ ಇರುವ ದೃಶ್ಯಸಿಸಿ ಕ್ಯಾಮೆರಾ ದಲ್ಲಿ ಡಿ.19ರಂದು ಸೆರೆಯಾಗಿತ್ತು. ಇವುಗಳ ಸೆರೆ ಕಾರ್ಯಾಚರಣೆಗೆ ಮೊದಲಿಗೆ ಎರಡು, ನಂತರ ಮೂರು ಆನೆಗಳನ್ನು ಕರೆತಂದು ವಾರದ ಮೇಲಾಗಿತ್ತು. ಗುರುವಾರ ಬೆಳಿಗ್ಗೆ ಮಾವುತರು ,ಕಾವಾಡಿಗರು ಆನೆಗಳೊಂದಿಗೆ ಶಿಬಿರಕ್ಕೆ ಹಿಂದಿರುಗಿದರು.

ಕಾರ್ಯಾಚರಣೆ ಸ್ಥಳದಲ್ಲಿ ವಾಕ್ ಥ್ರೋ ಕೇಜ್, ತುಮಕೂರು ಬೋನು ಮತ್ತು ಸಾಮಾನ್ಯ ಬೋನುಗಳು ಹಾಗೆಯೇ ಇವೆ. ಏನಾದರೂ ಈ ಭಾಗದಲ್ಲಿ ಮತ್ತೆ ಐದು ಹುಲಿಗಳ ಚಲನವಲನ ಕಂಡುಬಂದರೆ ಬಂಡೀಪುರ ಅಥವಾ ನಾಗರಹೊಳೆಯ ತಿಥಿ ಮತಿ ಶಿಬಿರದಿಂದ ಸಾಕಾನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

2 mins ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

39 mins ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

2 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

2 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

2 hours ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

3 hours ago