ಚಾಮರಾಜನಗರ

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು.

ಗ್ರಾಮದ ಆನೆಮಡುವಿನ ಕೆರೆಯ 5 ಕಿಮೀ ವ್ಯಾಪ್ತಿಯಲ್ಲಿ 5 ಹುಲಿಗಳ ಚಲನವಲನ ನಾಲ್ಕೈದು ದಿನಗಳಿಂದ ಕಂಡು ಬಾರದ ಕಾರಣ ಆನೆಗಳನ್ನು ಶಿಬಿರಕ್ಕೆ ಕಳುಹಿಸಿದ್ದಾರೆ.  ಗ್ರಾಮದ ಕುಮಾರಸ್ವಾಮಿ ಎಂಬವರ ತೋಟದ ಕಡೆಯಿಂದ ತಮ್ಮಡಹಳ್ಳಿಗೆ ಹೋಗುವ ದಾರಿಯಲ್ಲಿ 4 ಮರಿಗಳ ಜೊತೆ ತಾಯಿ ಹುಲಿ ಇರುವ ದೃಶ್ಯಸಿಸಿ ಕ್ಯಾಮೆರಾ ದಲ್ಲಿ ಡಿ.19ರಂದು ಸೆರೆಯಾಗಿತ್ತು. ಇವುಗಳ ಸೆರೆ ಕಾರ್ಯಾಚರಣೆಗೆ ಮೊದಲಿಗೆ ಎರಡು, ನಂತರ ಮೂರು ಆನೆಗಳನ್ನು ಕರೆತಂದು ವಾರದ ಮೇಲಾಗಿತ್ತು. ಗುರುವಾರ ಬೆಳಿಗ್ಗೆ ಮಾವುತರು ,ಕಾವಾಡಿಗರು ಆನೆಗಳೊಂದಿಗೆ ಶಿಬಿರಕ್ಕೆ ಹಿಂದಿರುಗಿದರು.

ಕಾರ್ಯಾಚರಣೆ ಸ್ಥಳದಲ್ಲಿ ವಾಕ್ ಥ್ರೋ ಕೇಜ್, ತುಮಕೂರು ಬೋನು ಮತ್ತು ಸಾಮಾನ್ಯ ಬೋನುಗಳು ಹಾಗೆಯೇ ಇವೆ. ಏನಾದರೂ ಈ ಭಾಗದಲ್ಲಿ ಮತ್ತೆ ಐದು ಹುಲಿಗಳ ಚಲನವಲನ ಕಂಡುಬಂದರೆ ಬಂಡೀಪುರ ಅಥವಾ ನಾಗರಹೊಳೆಯ ತಿಥಿ ಮತಿ ಶಿಬಿರದಿಂದ ಸಾಕಾನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

9 mins ago

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

36 mins ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

49 mins ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

57 mins ago

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…

1 hour ago

ತಂದೆ ಕೆಸಿಆರ್‌ಗೆ ಸೆಡ್ಡು: ಹೊಸ ಟಿಆರ್‌ಎಸ್‌ ಪಕ್ಷ ಸ್ಥಾಪಿಸಿದ ಕವಿತಾ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…

1 hour ago