ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು.
ಗ್ರಾಮದ ಆನೆಮಡುವಿನ ಕೆರೆಯ 5 ಕಿಮೀ ವ್ಯಾಪ್ತಿಯಲ್ಲಿ 5 ಹುಲಿಗಳ ಚಲನವಲನ ನಾಲ್ಕೈದು ದಿನಗಳಿಂದ ಕಂಡು ಬಾರದ ಕಾರಣ ಆನೆಗಳನ್ನು ಶಿಬಿರಕ್ಕೆ ಕಳುಹಿಸಿದ್ದಾರೆ. ಗ್ರಾಮದ ಕುಮಾರಸ್ವಾಮಿ ಎಂಬವರ ತೋಟದ ಕಡೆಯಿಂದ ತಮ್ಮಡಹಳ್ಳಿಗೆ ಹೋಗುವ ದಾರಿಯಲ್ಲಿ 4 ಮರಿಗಳ ಜೊತೆ ತಾಯಿ ಹುಲಿ ಇರುವ ದೃಶ್ಯಸಿಸಿ ಕ್ಯಾಮೆರಾ ದಲ್ಲಿ ಡಿ.19ರಂದು ಸೆರೆಯಾಗಿತ್ತು. ಇವುಗಳ ಸೆರೆ ಕಾರ್ಯಾಚರಣೆಗೆ ಮೊದಲಿಗೆ ಎರಡು, ನಂತರ ಮೂರು ಆನೆಗಳನ್ನು ಕರೆತಂದು ವಾರದ ಮೇಲಾಗಿತ್ತು. ಗುರುವಾರ ಬೆಳಿಗ್ಗೆ ಮಾವುತರು ,ಕಾವಾಡಿಗರು ಆನೆಗಳೊಂದಿಗೆ ಶಿಬಿರಕ್ಕೆ ಹಿಂದಿರುಗಿದರು.
ಕಾರ್ಯಾಚರಣೆ ಸ್ಥಳದಲ್ಲಿ ವಾಕ್ ಥ್ರೋ ಕೇಜ್, ತುಮಕೂರು ಬೋನು ಮತ್ತು ಸಾಮಾನ್ಯ ಬೋನುಗಳು ಹಾಗೆಯೇ ಇವೆ. ಏನಾದರೂ ಈ ಭಾಗದಲ್ಲಿ ಮತ್ತೆ ಐದು ಹುಲಿಗಳ ಚಲನವಲನ ಕಂಡುಬಂದರೆ ಬಂಡೀಪುರ ಅಥವಾ ನಾಗರಹೊಳೆಯ ತಿಥಿ ಮತಿ ಶಿಬಿರದಿಂದ ಸಾಕಾನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…