ಚಾಮರಾಜನಗರ

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು.

ಗ್ರಾಮದ ಆನೆಮಡುವಿನ ಕೆರೆಯ 5 ಕಿಮೀ ವ್ಯಾಪ್ತಿಯಲ್ಲಿ 5 ಹುಲಿಗಳ ಚಲನವಲನ ನಾಲ್ಕೈದು ದಿನಗಳಿಂದ ಕಂಡು ಬಾರದ ಕಾರಣ ಆನೆಗಳನ್ನು ಶಿಬಿರಕ್ಕೆ ಕಳುಹಿಸಿದ್ದಾರೆ.  ಗ್ರಾಮದ ಕುಮಾರಸ್ವಾಮಿ ಎಂಬವರ ತೋಟದ ಕಡೆಯಿಂದ ತಮ್ಮಡಹಳ್ಳಿಗೆ ಹೋಗುವ ದಾರಿಯಲ್ಲಿ 4 ಮರಿಗಳ ಜೊತೆ ತಾಯಿ ಹುಲಿ ಇರುವ ದೃಶ್ಯಸಿಸಿ ಕ್ಯಾಮೆರಾ ದಲ್ಲಿ ಡಿ.19ರಂದು ಸೆರೆಯಾಗಿತ್ತು. ಇವುಗಳ ಸೆರೆ ಕಾರ್ಯಾಚರಣೆಗೆ ಮೊದಲಿಗೆ ಎರಡು, ನಂತರ ಮೂರು ಆನೆಗಳನ್ನು ಕರೆತಂದು ವಾರದ ಮೇಲಾಗಿತ್ತು. ಗುರುವಾರ ಬೆಳಿಗ್ಗೆ ಮಾವುತರು ,ಕಾವಾಡಿಗರು ಆನೆಗಳೊಂದಿಗೆ ಶಿಬಿರಕ್ಕೆ ಹಿಂದಿರುಗಿದರು.

ಕಾರ್ಯಾಚರಣೆ ಸ್ಥಳದಲ್ಲಿ ವಾಕ್ ಥ್ರೋ ಕೇಜ್, ತುಮಕೂರು ಬೋನು ಮತ್ತು ಸಾಮಾನ್ಯ ಬೋನುಗಳು ಹಾಗೆಯೇ ಇವೆ. ಏನಾದರೂ ಈ ಭಾಗದಲ್ಲಿ ಮತ್ತೆ ಐದು ಹುಲಿಗಳ ಚಲನವಲನ ಕಂಡುಬಂದರೆ ಬಂಡೀಪುರ ಅಥವಾ ನಾಗರಹೊಳೆಯ ತಿಥಿ ಮತಿ ಶಿಬಿರದಿಂದ ಸಾಕಾನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago