ಚಾಮರಾಜನಗರ

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು.

ಗ್ರಾಮದ ಆನೆಮಡುವಿನ ಕೆರೆಯ 5 ಕಿಮೀ ವ್ಯಾಪ್ತಿಯಲ್ಲಿ 5 ಹುಲಿಗಳ ಚಲನವಲನ ನಾಲ್ಕೈದು ದಿನಗಳಿಂದ ಕಂಡು ಬಾರದ ಕಾರಣ ಆನೆಗಳನ್ನು ಶಿಬಿರಕ್ಕೆ ಕಳುಹಿಸಿದ್ದಾರೆ.  ಗ್ರಾಮದ ಕುಮಾರಸ್ವಾಮಿ ಎಂಬವರ ತೋಟದ ಕಡೆಯಿಂದ ತಮ್ಮಡಹಳ್ಳಿಗೆ ಹೋಗುವ ದಾರಿಯಲ್ಲಿ 4 ಮರಿಗಳ ಜೊತೆ ತಾಯಿ ಹುಲಿ ಇರುವ ದೃಶ್ಯಸಿಸಿ ಕ್ಯಾಮೆರಾ ದಲ್ಲಿ ಡಿ.19ರಂದು ಸೆರೆಯಾಗಿತ್ತು. ಇವುಗಳ ಸೆರೆ ಕಾರ್ಯಾಚರಣೆಗೆ ಮೊದಲಿಗೆ ಎರಡು, ನಂತರ ಮೂರು ಆನೆಗಳನ್ನು ಕರೆತಂದು ವಾರದ ಮೇಲಾಗಿತ್ತು. ಗುರುವಾರ ಬೆಳಿಗ್ಗೆ ಮಾವುತರು ,ಕಾವಾಡಿಗರು ಆನೆಗಳೊಂದಿಗೆ ಶಿಬಿರಕ್ಕೆ ಹಿಂದಿರುಗಿದರು.

ಕಾರ್ಯಾಚರಣೆ ಸ್ಥಳದಲ್ಲಿ ವಾಕ್ ಥ್ರೋ ಕೇಜ್, ತುಮಕೂರು ಬೋನು ಮತ್ತು ಸಾಮಾನ್ಯ ಬೋನುಗಳು ಹಾಗೆಯೇ ಇವೆ. ಏನಾದರೂ ಈ ಭಾಗದಲ್ಲಿ ಮತ್ತೆ ಐದು ಹುಲಿಗಳ ಚಲನವಲನ ಕಂಡುಬಂದರೆ ಬಂಡೀಪುರ ಅಥವಾ ನಾಗರಹೊಳೆಯ ತಿಥಿ ಮತಿ ಶಿಬಿರದಿಂದ ಸಾಕಾನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago