ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ ಸಿಹಿ ದ್ರಾವಣ ಉತ್ಪತ್ತಿಯಾಗಿ ಹರಿಯುತ್ತಿರುವ ಘಟನೆ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರಲ್ಲಿ ನಡೆದಿದೆ.
ಕುರಟ್ಟಿ ಹೊಸೂರಿನ ಮುನಿಸಿದ್ದ ಎಂಬವವರ ಜಮೀನಿನಲ್ಲಿ ಬೆಳೆದಿರುವ ಸುಮಾರು 15 ವರ್ಷದ ಬೇವಿನ ಮರದಲ್ಲಿ ಈ ವಿಸ್ಮಯ ಕಂಡುಬಂದಿದ್ದು, ಹಾಲಿನಂತೆ ಬಣ್ಣದ ನೀರು ಬೇವಿನ ಮರದ ಮೂರ್ನಾಲ್ಕು ಕಡೆಯಿಂದ ಜಿನಗುತ್ತಿದೆ. ಬಿಳಿ ಬಣ್ಣದ ದ್ರಾವಣವನ್ನ ಸೇವಿಸಿ ಸಿಹಿ ಜೇನಿನಂತೆ ರುಚಿ ಇರುವುದನ್ನು ತಿಳಿದು ಕುರಟ್ಟಿ ಹೊಸೂರು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.
ಬೇವಿನ ಮರ ಕಹಿ ಆದ್ರೆ ಆ ಮರದಿಂದ ಬರುತ್ತಿರುವ ದ್ರಾವಣ ಸಕ್ಕರೆಯಷ್ಟೇ ಸಿಹಿಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ಬೇವಿನ ಮರ ನಮ್ಮ ಜಮೀನಿನಲ್ಲಿ ಬೆಳೆದು ಸುಮಾರು 15 ವರ್ಷಗಳು ಕಳೆದಿದೆ. ಕಳೆದ ನಾಲ್ಕು ದಿನಗಳಿಂದ ಬಿಳಿ ಬಣ್ಣದ ದ್ರಾವಣ ಹರಿಯುತ್ತಿದ್ದು, ಇದನ್ನು ಸವಿದು ನೋಡಿದಾಗ ಸಿಹಿ ಇರುವುದು ಕಂಡು ಬಂದಿದೆ. ಬೇವಿನ ಮರ ಸಂಪೂರ್ಣ ಕಹಿಯಾಗಿದ್ದರೂ, ಬಿಳಿ ದ್ರಾವಣ ಸಿಹಿಯಾಗಿರುವುದು ಅಚ್ಚರಿ ಮೂಡಿಸಿದೆ ಎಂದು ಮಾಲೀಕ ಮುನಿಸಿದ್ದ ಶೆಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…