ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ ಸಿಹಿ ದ್ರಾವಣ ಉತ್ಪತ್ತಿಯಾಗಿ ಹರಿಯುತ್ತಿರುವ ಘಟನೆ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರಲ್ಲಿ ನಡೆದಿದೆ.
ಕುರಟ್ಟಿ ಹೊಸೂರಿನ ಮುನಿಸಿದ್ದ ಎಂಬವವರ ಜಮೀನಿನಲ್ಲಿ ಬೆಳೆದಿರುವ ಸುಮಾರು 15 ವರ್ಷದ ಬೇವಿನ ಮರದಲ್ಲಿ ಈ ವಿಸ್ಮಯ ಕಂಡುಬಂದಿದ್ದು, ಹಾಲಿನಂತೆ ಬಣ್ಣದ ನೀರು ಬೇವಿನ ಮರದ ಮೂರ್ನಾಲ್ಕು ಕಡೆಯಿಂದ ಜಿನಗುತ್ತಿದೆ. ಬಿಳಿ ಬಣ್ಣದ ದ್ರಾವಣವನ್ನ ಸೇವಿಸಿ ಸಿಹಿ ಜೇನಿನಂತೆ ರುಚಿ ಇರುವುದನ್ನು ತಿಳಿದು ಕುರಟ್ಟಿ ಹೊಸೂರು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.
ಬೇವಿನ ಮರ ಕಹಿ ಆದ್ರೆ ಆ ಮರದಿಂದ ಬರುತ್ತಿರುವ ದ್ರಾವಣ ಸಕ್ಕರೆಯಷ್ಟೇ ಸಿಹಿಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ಬೇವಿನ ಮರ ನಮ್ಮ ಜಮೀನಿನಲ್ಲಿ ಬೆಳೆದು ಸುಮಾರು 15 ವರ್ಷಗಳು ಕಳೆದಿದೆ. ಕಳೆದ ನಾಲ್ಕು ದಿನಗಳಿಂದ ಬಿಳಿ ಬಣ್ಣದ ದ್ರಾವಣ ಹರಿಯುತ್ತಿದ್ದು, ಇದನ್ನು ಸವಿದು ನೋಡಿದಾಗ ಸಿಹಿ ಇರುವುದು ಕಂಡು ಬಂದಿದೆ. ಬೇವಿನ ಮರ ಸಂಪೂರ್ಣ ಕಹಿಯಾಗಿದ್ದರೂ, ಬಿಳಿ ದ್ರಾವಣ ಸಿಹಿಯಾಗಿರುವುದು ಅಚ್ಚರಿ ಮೂಡಿಸಿದೆ ಎಂದು ಮಾಲೀಕ ಮುನಿಸಿದ್ದ ಶೆಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…