ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ ಸಿಹಿ ದ್ರಾವಣ ಉತ್ಪತ್ತಿಯಾಗಿ ಹರಿಯುತ್ತಿರುವ ಘಟನೆ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರಲ್ಲಿ ನಡೆದಿದೆ.
ಕುರಟ್ಟಿ ಹೊಸೂರಿನ ಮುನಿಸಿದ್ದ ಎಂಬವವರ ಜಮೀನಿನಲ್ಲಿ ಬೆಳೆದಿರುವ ಸುಮಾರು 15 ವರ್ಷದ ಬೇವಿನ ಮರದಲ್ಲಿ ಈ ವಿಸ್ಮಯ ಕಂಡುಬಂದಿದ್ದು, ಹಾಲಿನಂತೆ ಬಣ್ಣದ ನೀರು ಬೇವಿನ ಮರದ ಮೂರ್ನಾಲ್ಕು ಕಡೆಯಿಂದ ಜಿನಗುತ್ತಿದೆ. ಬಿಳಿ ಬಣ್ಣದ ದ್ರಾವಣವನ್ನ ಸೇವಿಸಿ ಸಿಹಿ ಜೇನಿನಂತೆ ರುಚಿ ಇರುವುದನ್ನು ತಿಳಿದು ಕುರಟ್ಟಿ ಹೊಸೂರು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.
ಬೇವಿನ ಮರ ಕಹಿ ಆದ್ರೆ ಆ ಮರದಿಂದ ಬರುತ್ತಿರುವ ದ್ರಾವಣ ಸಕ್ಕರೆಯಷ್ಟೇ ಸಿಹಿಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ಬೇವಿನ ಮರ ನಮ್ಮ ಜಮೀನಿನಲ್ಲಿ ಬೆಳೆದು ಸುಮಾರು 15 ವರ್ಷಗಳು ಕಳೆದಿದೆ. ಕಳೆದ ನಾಲ್ಕು ದಿನಗಳಿಂದ ಬಿಳಿ ಬಣ್ಣದ ದ್ರಾವಣ ಹರಿಯುತ್ತಿದ್ದು, ಇದನ್ನು ಸವಿದು ನೋಡಿದಾಗ ಸಿಹಿ ಇರುವುದು ಕಂಡು ಬಂದಿದೆ. ಬೇವಿನ ಮರ ಸಂಪೂರ್ಣ ಕಹಿಯಾಗಿದ್ದರೂ, ಬಿಳಿ ದ್ರಾವಣ ಸಿಹಿಯಾಗಿರುವುದು ಅಚ್ಚರಿ ಮೂಡಿಸಿದೆ ಎಂದು ಮಾಲೀಕ ಮುನಿಸಿದ್ದ ಶೆಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…