ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ.
ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ಗುಣಮಟ್ಟ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದೆ. ಇದಲ್ಲದೆ ಭಾನುವಾರ ಬೆಳಗ್ಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಹಿಂಬದಿಯ ಟೈರ್ ನಟ್ ಬೋಲ್ಟ್ ಏಕಾಏಕಿ ಕಳಚಿದ ಶಬ್ದ ಕೇಳಿ ಬಂದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿ ಮುಂದೆ ಆಗಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಕಾಡಂಚಿನ ಗ್ರಾಮಗಳಿಗೆ ಗುಣಮಟ್ಟದಿಂದ ಕೂಡಿರುವ ಬಸ್ ವ್ಯವಸ್ಥೆ ಕಲ್ಪಿಸಬೇಕು ಇಲ್ಲದಿದ್ದರೆ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡ ಎಸ್ ವೆಂಕಟಾಚಲ ಎಚ್ಚರಿಕೆ ನೀಡಿದ್ದಾರೆ.
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…
ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…