ಚಾಮರಾಜನಗರ

ನೆಟ್‌ವರ್ಕ್ ಸಮಸ್ಯೆ: ಪಡಿತರ ಪಡೆಯಲು ಗ್ರಾಮಸ್ಥರ ಪರದಾಟ

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್‌ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿ ಹಾಗೂ ಅಸ್ತೂರು ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿಗಳಿವೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಪಡಿತರದಾರರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುತ್ತಿದ್ದಾರೆ. ಆದರೆ ಪ್ರತಿ ತಿಂಗಳು ಪ್ರತಿಯೊಬ್ಬರು ಬೆರಳಚ್ಚು ಮಾಡಿದ ನಂತರ ಪಡಿತರ ಪಡೆದುಕೊಳ್ಳಬೇಕು. ಆದರೆ ಅಸ್ತೂರು ರಾಮೇಗೌಡನಹಳ್ಳಿಯಲ್ಲಿ ನೆಟ್‌ವರ್ಕ್ ಸಮಸ್ಯೆ ಇರುವುದರಿಂದ ಸಾರ್ವಜನಿಕರು ಪ್ರತಿ ತಿಂಗಳು ನರಕಯಾತನೆ ಅನುಭವಿಸುತ್ತಿದ್ದಾರೆ.

ಅಸ್ತೂರು ಗ್ರಾಮದಲ್ಲಿ 250 ಕ್ಕೂ ಹೆಚ್ಚು ಪಡಿತರ ಕುಟುಂಬಗಳಿವೆ. ಇವರಲ್ಲಿ ಅಂಗವಿಕಲರು, ಗರ್ಭಿಣಿಯರು, ವಯೋ ವೃದ್ಧರು ಕೂಡ ಇದ್ದಾರೆ. ಅಸ್ತೂರು ಗ್ರಾಮದಿಂದ ಎರಡು ಕಿಲೋ ಮೀಟರ್ ದೂರದ ಪೊನ್ನಾಚಿ ಗ್ರಾಮಕ್ಕೆ ನಡೆದುಕೊಂಡು ಬಂದು ಬೆರಳಚ್ಚು ಮಾಡಿಸಬೇಕಿದೆ. ಇದು ಇಲ್ಲಿನ ಸ್ಥಳೀಯರಿಗೆ ಪ್ರತಿ ತಿಂಗಳು ತೊಂದರೆಯಾಗುತ್ತಿದೆ.

ಅಂಗಡಿಯವರು ಬೆರಳಚ್ಚು ಮಾಡುವ ದಿನ ಸರದಿ ಸಾಲಿನಲ್ಲಿ ನಿಂತು ಊಟ, ಕುಡಿಯುವ ನೀರು, ಇಲ್ಲದೆ ಗಂಟೆಗಟ್ಟಲೆ ಕಾದು ನಿಂತು ಬೆರಳಿಡಬೇಕಿದೆ. ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಗರ್ಭಿಣಿಯರು, ವಯೋವೃದ್ದರು ಹಾಗೂ ಮಕ್ಕಳ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಅಧಿಕಾರಿಗಳು ತಿಳಿದುಕೊಳ್ಳಬೇಕು. ಕಾಡಂಚಿನ ಗ್ರಾಮಗಳಾಗಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಕೂಡ ಆಗಾಗ ನಡೆಯುತ್ತಲೇ ಇರುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

14 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago