Network issues Villagers struggle to collect ration
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್ವರ್ಕ್ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿ ಹಾಗೂ ಅಸ್ತೂರು ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿಗಳಿವೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಪಡಿತರದಾರರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುತ್ತಿದ್ದಾರೆ. ಆದರೆ ಪ್ರತಿ ತಿಂಗಳು ಪ್ರತಿಯೊಬ್ಬರು ಬೆರಳಚ್ಚು ಮಾಡಿದ ನಂತರ ಪಡಿತರ ಪಡೆದುಕೊಳ್ಳಬೇಕು. ಆದರೆ ಅಸ್ತೂರು ರಾಮೇಗೌಡನಹಳ್ಳಿಯಲ್ಲಿ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಸಾರ್ವಜನಿಕರು ಪ್ರತಿ ತಿಂಗಳು ನರಕಯಾತನೆ ಅನುಭವಿಸುತ್ತಿದ್ದಾರೆ.
ಅಸ್ತೂರು ಗ್ರಾಮದಲ್ಲಿ 250 ಕ್ಕೂ ಹೆಚ್ಚು ಪಡಿತರ ಕುಟುಂಬಗಳಿವೆ. ಇವರಲ್ಲಿ ಅಂಗವಿಕಲರು, ಗರ್ಭಿಣಿಯರು, ವಯೋ ವೃದ್ಧರು ಕೂಡ ಇದ್ದಾರೆ. ಅಸ್ತೂರು ಗ್ರಾಮದಿಂದ ಎರಡು ಕಿಲೋ ಮೀಟರ್ ದೂರದ ಪೊನ್ನಾಚಿ ಗ್ರಾಮಕ್ಕೆ ನಡೆದುಕೊಂಡು ಬಂದು ಬೆರಳಚ್ಚು ಮಾಡಿಸಬೇಕಿದೆ. ಇದು ಇಲ್ಲಿನ ಸ್ಥಳೀಯರಿಗೆ ಪ್ರತಿ ತಿಂಗಳು ತೊಂದರೆಯಾಗುತ್ತಿದೆ.
ಅಂಗಡಿಯವರು ಬೆರಳಚ್ಚು ಮಾಡುವ ದಿನ ಸರದಿ ಸಾಲಿನಲ್ಲಿ ನಿಂತು ಊಟ, ಕುಡಿಯುವ ನೀರು, ಇಲ್ಲದೆ ಗಂಟೆಗಟ್ಟಲೆ ಕಾದು ನಿಂತು ಬೆರಳಿಡಬೇಕಿದೆ. ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಗರ್ಭಿಣಿಯರು, ವಯೋವೃದ್ದರು ಹಾಗೂ ಮಕ್ಕಳ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಅಧಿಕಾರಿಗಳು ತಿಳಿದುಕೊಳ್ಳಬೇಕು. ಕಾಡಂಚಿನ ಗ್ರಾಮಗಳಾಗಿರುವುದರಿಂದ ಕಾಡು ಪ್ರಾಣಿಗಳ ಹಾವಳಿ ಕೂಡ ಆಗಾಗ ನಡೆಯುತ್ತಲೇ ಇರುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…