ಚಾಮರಾಜನಗರ : ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಈ ಸಭೆ ನಡೆಸಲಾಗಿದ್ದು, ಎರಡು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಚರ್ಚಿಸಲಾಗಿದೆ.
ಈ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ಹೊರಹಾಕಿದರು. ಅರಣ್ಯ ಇಲಾಖೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಬೇರೆ ಯಾವುದೇ ರಾಜ್ಯದಲ್ಲೂ ಇಷ್ಟು ಪ್ರಾಣಿ ಹಾಗೂ ಮಾನವ ಸಂಘರ್ಷವಾಗುತ್ತಿಲ್ಲ. ನಮ್ಮಲ್ಲಿ ಮಾತ್ರ ಹೆಚ್ಚುತ್ತಿದೆ. ಇದಕ್ಕೆ ಅರಣ್ಯಾಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನು ಓದಿ: ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ : ಆರ್.ಅಶೋಕ ಆಕ್ರೋಶ
ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾಕಷ್ಟು ಅಕ್ರಮ ರೆಸಾರ್ಟ್ಗಳು ನಡೆಯುತ್ತಿವೆ. ವೀರಪ್ಪನ್ ಇದ್ದಾಗಲೇ ಕಾಡು ಚೆನ್ನಾಗಿತ್ತು. ಅಕ್ರಮ ಗಣಿಗಾರಿಕೆ-ರೆಸಾರ್ಟ್ಗಳು ನಡೆಯುತ್ತಿರಲಿಲ್ಲ. ಅಧಿಕಾರಿಗಳಿಗಿಂತ ವೀರಪ್ಪನ್ ಪರವಾಗಿರಲಿಲ್ಲ ಎಂದು ರೈತರು ಸಿಡಿಮಿಡಿಗೊಂಡರು.
ಪ್ರಾಣಿಯಿಂದ ಮನುಷ್ಯರು ಸತ್ತಾಗ ಸಚಿವರು, ಶಾಸಕರು, ಡಿಸಿಎಫ್ಗಳ ಮೇಲೆ ಕೇಸು ಹಾಕಬೇಕು. ಇಷ್ಟು ಹುಲಿ ಹಾಗೂ ಮನುಷ್ಯರ ಸಾವಿಗೆ ಅಧಿಕಾರಿಗಳು ಹಾಗೂ ಅರಣ್ಯ ಸಚಿವರೇ ಕಾರಣ. ಈಗಾಗಲೇ ಅರಣ್ಯ ಸಚಿವರು ರಾಜೀನಾಮೆ ನೀಡಬೇಕಿತ್ತು. ಮೊದಲೇ ಸರಿಯಾದ ಸಭೆ ನಡೆಸಿ ಕ್ರಮ ಕೈಗೊಂಡಿದ್ದರೆ ಯಾವ ಸಾವೂ ಆಗುತ್ತಿರಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ದರ್ಶನ್ ಧ್ರುವನಾರಾಯಣ್, ಎಂಎಲ್ಸಿ ಮಂಜೇಗೌಡ ಹಾಗೂ ಅರಣ್ಯ ಇಲಾಖೆ ಪಿಸಿಸಿಎಫ್ಗಳು ಸೇರಿ ಉನ್ನತಾಧಿಕಾರಿಗಳು ಮತ್ತು ರೈತ ಮುಖಂಡರು ಸಭೆಯಲ್ಲಿ ಭಾಗಿಯಾದರು.
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…