ಚಾಮರಾಜನಗರ

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.

ಬಂಡೀಪುರ ಬಿಳಿಗಿರಂಗನ ಬೆಟ್ಟ, ಕಬಿನಿ, ನಾಗರಹೊಳೆ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ ಮಾಡಲಾಗಿದೆ ಎಂಬ ದೂರಿನ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು.

ಪರಿಸರ ಸೂಕ್ಷ್ಮ ವಲಯ ಘೋಷಣೆಯಾದ ಬಳಿಕ ರೆಸಾರ್ಟ್ ಹೋಂಸ್ಟೇಗಳ ನಿರ್ಮಾಣಕ್ಕೆ ಅವಕಾಶ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಯಮ ಉಲ್ಲಂಘಿಸಿ ರೆಸಾರ್ಟ್ ನಿರ್ಮಾಣ ಮಾಡಿರುವ ದೂರಿನ ಸಂಬಂಧ ತಾಲ್ಲೂಕು, ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿ, ಕಂದಾಯ, ಪರಿಸರ, ಪ್ರವಾಸೋದ್ಯಮ, ಅಬಕಾರಿ ಇಲಾಖೆಗಳು ಪರಿಶೀಲನೆ ನಡೆಸಬೇಕು. ಅಕ್ರಮ ಎಸಗಿರುವುದು ಕಂಡುಬಂದಲ್ಲಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ, ಅಕ್ರಮ ಕುರಿತು ದಾಖಲೆ ಸಂಗ್ರಹಿಸುವಲ್ಲಿ ಅರಣ್ಯ ಇಲಾಖೆ ಅಽಕಾರಿಗಳು ವಿಫಲವಾಗಿದ್ದು , ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವುಗೊಳಿಸದಿದ್ದರೆ ಫೆ.25ರ ಬಳಿಕ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಬೇಡಗುಳಿ, ಅತ್ತೀಖಾನೆ, ಹೊನ್ನಮೇಟಿಯಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿ ಗುತ್ತಿಗೆ ಅವಧಿ ಮುಗಿದರೂ ಸರ್ಕಾರಕ್ಕೆ ಬಿಟ್ಟುಕೊಟ್ಟಿಲ್ಲ. ಕಾಫಿ ತೋಟಗಳಲ್ಲಿನ ಕಳೆನಾಶಕದಿಂದ ವನ್ಯಜೀವಿ ಹಾಗೂ ಅರಣ್ಯ ಸಂಪತ್ತು ನಾಶವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಒ ಮೋನಾ ರೋತ್, ಮುಖಂಡರಾದ ಮಲೆಯೂರು ಮಹೇಂದ್ರ, ಮುಕ್ಕಡಹಳ್ಳಿ ರಾಜು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago