No Ban on Grazing Cattle in Forest Areas: Clarifies R. Narendra
ಹನೂರು: ತಮಿಳುನಾಡು ಹಸುಗಳನ್ನು ಹೊರತುಪಡಿಸಿ ನಮ್ಮ ಸ್ಥಳೀಯ ರೈತರ ಕುರಿ, ಮೇಕೆ, ಹಸು ಸೇರಿದಂತೆ ಇನ್ನಿತರ ಜಾನುವಾರುಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಮೇಯಿಸಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ನಿಟ್ಟಿನಲ್ಲಿ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಜಿ ಶಾಸಕ ಆರ್.ನರೇಂದ್ರ ಸ್ಪಷ್ಟಪಡಿಸಿದ್ದಾರೆ.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಐದು ಹುಲಿಗಳು ಮೃತಪಟ್ಟ ನಂತರ ಹಲವಾರು ಊಹಾಪೋಹ ಸುದ್ದಿಗಳು ಹರಿದಾಡುತ್ತಿವೆ.
ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಹೊರ ರಾಜ್ಯದ ಹಸುಗಳನ್ನು ಕರೆತಂದು ನಮ್ಮ ಅರಣ್ಯ ಪ್ರದೇಶದಲ್ಲಿ ಮೇಯಿಸಲು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ದೂರವಾಣಿ ಮುಖಾಂತರ ಸಚಿವರ ಜೊತೆ ಮಾತನಾಡಿ ಚರ್ಚೆ ನಡೆಸಿದ ವೇಳೆ ಅವರು ಸ್ಥಳೀಯ ರೈತರುಗಳಿಗೆ ಯಾವುದೇ ತೊಂದರೆ ಕೊಡುವ ಉದ್ದೇಶವಿಲ್ಲ, ಹಿಂದೆ ಅರಣ್ಯ ವ್ಯಾಪ್ತಿಯಲ್ಲಿ ಜಾನುವಾರುಗಳನ್ನು ಮೇಯಿಸಿಕೊಂಡು ಸಂಜೆಯಾಗುತ್ತಿದ್ದಂತೆ ವಾಪಸ್ ಕರೆತಂದು ತಮ್ಮ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಅಥವಾ ಬಯಲು ಪ್ರದೇಶದಲ್ಲಿ ಬಿಡುತ್ತಿದ್ದರು. ಅದೇ ಮಾದರಿಯಲ್ಲಿ ಆದೇಶ ಮಾಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ ಆದ್ದರಿಂದ ರೈತರು ಅರಣ್ಯದಲ್ಲಿ ಮೇವು ಮೇಯಿಸುವ ವಿಚಾರವಾಗಿ ಯಾವುದೇ ಅನಗತ್ಯ ಗೊಂದಲಗಳಿಗೆ ಯಾವುದೇ ಪ್ರಾತಿನಿದ್ಯ ನೀಡಬಾರದು ಎಂದು ತಿಳಿಸಿದರು.
ನಮ್ಮ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಶೇ.48 ರಷ್ಟು ಭೂ ಪ್ರದೇಶವಿದ್ದು ಶೇಕಡಾ.52ರಷ್ಟು ದಟ್ಟ ಅರಣ್ಯದಿಂದ ಕೂಡಿದೆ. ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ವಾಸಿಸುವ ರೈತರು ಅರಣ್ಯವನ್ನು ನಂಬಿಕೊಂಡು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಹಸು, ಕುರಿ, ಮೇಕೆ ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಸಾಕಾಣಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ರೈತರ ಪರವಾಗಿದೆ ಎಂದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…