ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇ.ಇ.ಇಮ್ಯಾನುವೆಲ್ ಸಂತೋಷ್ ಕುಮಾರ್, ಎಇಇ ಸುಧನ್ವ ನಾಗ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಕೊಳವೆಬಾವಿಗಳ ನೀರನ್ನು ಪರಿಶೀಲನೆ ನಡೆಸಿದ್ದಾರೆ. ಇದು ಆಂದೋಲನ ವರದಿಯ ಫಲಶೃತಿ.
ಹನೂರು ತಾಲ್ಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಳಕೆ ಮಾಡುತ್ತಿರುವ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ 30ಕ್ಕೂ ಹೆಚ್ಚು ಜನರು ಕಿಡ್ನಿ ವೈಫಲ್ಯದಿಂದ ನರಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.
ಈ ಸಂಬಂಧ ಆಂದೋಲನ ದಿನಪತ್ರಿಕೆಯಲ್ಲಿ ಫ್ಲೋರೈಡ್ ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ ಎಂಬ ಶೀರ್ಷಿಕೆಯಡಿ ಇಂದು(ಫೆಬ್ರವರಿ.3ರಂದು) ವರದಿ ಪ್ರಕಟಿಸಲಾಗಿತ್ತು.
ವರದಿಯಿಂದ ಎಚ್ಚೆತ್ತ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಎರಡು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿ ಸಾರ್ವಜನಿಕರು ಬಳಸುತ್ತಿರುವ ಕುಡಿಯುವ ನೀರನ್ನು ನಾಲ್ಕು ವಿಧದಲ್ಲಿ ಸ್ಥಳೀಯ ಸಾರ್ವಜನಿಕರ ಸಮ್ಮುಖದಲ್ಲಿಯೇ ಟೆಸ್ಟಿಂಗ್ ಮಾಡಿ ಸಾರ್ವಜನಿಕರಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ.
ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳಲ್ಲಿ ಕುಡಿಯಲು ಬಳಸುತ್ತಿರುವ ನೀರಿನಲ್ಲಿ ಫ್ಲೋರೈಡ್ ಅಂಶ ಕಡಿಮೆ ಇರುವುದರಿಂದ ಇದನ್ನು ಕುಡಿಯಲು ಬಳಸಬಹುದು ಎಂದು ವರದಿ ನೀಡಿದ್ದಾರೆ.
ಇದಲ್ಲದೇ ಮಾರ್ಟಳ್ಳಿ ಕೇಂದ್ರ ಸ್ಥಾನದ ಸ್ಥಳೀಯರು ಬೇರೆ ಕೊಳವೆ ಬಾವಿಗಳಿಂದ ಒಂದು ಚೆಂಬು ಹಾಗೂ ಎರಡು ಪ್ಲಾಸ್ಟಿಕ್ ಬಾಟೆಲ್ಗಳಲ್ಲಿ ನೀರು ಸಂಗ್ರಹಿಸಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಮನವಿಯ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಈ ನೀರಿನಲ್ಲಿ ಸಹ ಫ್ಲೋರೈಡ್ ಅಂಶ ಕಡಿಮೆ ಇದ್ದು ಬಳಕೆ ಮಾಡಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಟ್ಟಾರೆ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರು ಬಳಕೆ ಮಾಡುತ್ತಿರುವುದರಿಂದ ಕಿಡ್ನಿ ಸಮಸ್ಯೆ ಉಂಟಾಗುತ್ತಿದೆ ಎಂಬ ಸ್ಥಳೀಯರ ಅನುಮಾನವನ್ನು ಅಧಿಕಾರಿಗಳು ದೂರ ಮಾಡಿದ್ದಾರೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…