ಚಾಮರಾಜನಗರ

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇ.ಇ.ಇಮ್ಯಾನುವೆಲ್ ಸಂತೋಷ್ ಕುಮಾರ್, ಎಇಇ ಸುಧನ್ವ ನಾಗ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಕೊಳವೆಬಾವಿಗಳ ನೀರನ್ನು ಪರಿಶೀಲನೆ ನಡೆಸಿದ್ದಾರೆ. ಇದು ಆಂದೋಲನ ವರದಿಯ ಫಲಶೃತಿ.

ಹನೂರು ತಾಲ್ಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಳಕೆ ಮಾಡುತ್ತಿರುವ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ 30ಕ್ಕೂ ಹೆಚ್ಚು ಜನರು ಕಿಡ್ನಿ ವೈಫಲ್ಯದಿಂದ ನರಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಈ ಸಂಬಂಧ ಆಂದೋಲನ ದಿನಪತ್ರಿಕೆಯಲ್ಲಿ ಫ್ಲೋರೈಡ್ ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ ಎಂಬ ಶೀರ್ಷಿಕೆಯಡಿ ಇಂದು(ಫೆಬ್ರವರಿ.3ರಂದು) ವರದಿ ಪ್ರಕಟಿಸಲಾಗಿತ್ತು.

ವರದಿಯಿಂದ ಎಚ್ಚೆತ್ತ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಎರಡು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿ ಸಾರ್ವಜನಿಕರು ಬಳಸುತ್ತಿರುವ ಕುಡಿಯುವ ನೀರನ್ನು ನಾಲ್ಕು ವಿಧದಲ್ಲಿ ಸ್ಥಳೀಯ ಸಾರ್ವಜನಿಕರ ಸಮ್ಮುಖದಲ್ಲಿಯೇ ಟೆಸ್ಟಿಂಗ್ ಮಾಡಿ ಸಾರ್ವಜನಿಕರಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ.

ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳಲ್ಲಿ ಕುಡಿಯಲು ಬಳಸುತ್ತಿರುವ ನೀರಿನಲ್ಲಿ ಫ್ಲೋರೈಡ್ ಅಂಶ ಕಡಿಮೆ ಇರುವುದರಿಂದ ಇದನ್ನು ಕುಡಿಯಲು ಬಳಸಬಹುದು ಎಂದು ವರದಿ ನೀಡಿದ್ದಾರೆ.

ಇದಲ್ಲದೇ ಮಾರ್ಟಳ್ಳಿ ಕೇಂದ್ರ ಸ್ಥಾನದ ಸ್ಥಳೀಯರು ಬೇರೆ ಕೊಳವೆ ಬಾವಿಗಳಿಂದ ಒಂದು ಚೆಂಬು ಹಾಗೂ ಎರಡು ಪ್ಲಾಸ್ಟಿಕ್ ಬಾಟೆಲ್‌ಗಳಲ್ಲಿ ನೀರು ಸಂಗ್ರಹಿಸಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಮನವಿಯ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಈ ನೀರಿನಲ್ಲಿ ಸಹ ಫ್ಲೋರೈಡ್ ಅಂಶ ಕಡಿಮೆ ಇದ್ದು ಬಳಕೆ ಮಾಡಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರು ಬಳಕೆ ಮಾಡುತ್ತಿರುವುದರಿಂದ ಕಿಡ್ನಿ ಸಮಸ್ಯೆ ಉಂಟಾಗುತ್ತಿದೆ ಎಂಬ ಸ್ಥಳೀಯರ ಅನುಮಾನವನ್ನು ಅಧಿಕಾರಿಗಳು ದೂರ ಮಾಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago