ಚಾಮರಾಜನಗರ

ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನ- ಹಣ ಕಳ್ಳತನ

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ.

ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಘಟನೆ ವಿವರ: ಹೊಸದೊಡ್ಡಿ ಗ್ರಾಮದ ಜಗದೀಶ್ ರೆಡ್ಡಿ ರವರ ಪತ್ನಿ ರುಕ್ಮಿಣಿ ಕೌದಳ್ಳಿ ಗ್ರಾಮಕ್ಕೆ ಹಾಲು ಹಾಕಲು ತೆರಳಿದ್ದಾಗ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಜಗದೀಶ್ ರವರನ್ನು ನೀರು ಕೊಡುವಂತೆ ಕೇಳಿದ್ದಾರೆ. ನೀರು ತರಲು ಒಳಗೆ ಹೋಗುತ್ತಿದ್ದಂತೆ ಇಬ್ಬರು ಅಪರಿಚಿತರು ಅವರ ಕೈಕಾಲು, ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ 168 ಗ್ರಾಂ ಚಿನ್ನ ಹಾಗೂ 41,000 ರೂ. ಹಣ ಕಳವು ಮಾಡಿ ಪರಾರಿಯಾಗಿದ್ದಾರೆ. ಜಗದೀಶ್ ರೆಡ್ಡಿ ರವರ ಅಣ್ಣ ಮನೆಗೆ ಬಂದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಗಳನ್ನು ಧರ್ಮ ರೆಡ್ಡಿ ಎಂಬುವರು ನೋಡಿದ್ದು 30 ರಿಂದ 35 ವರ್ಷ ಒಳಗಿನ ವ್ಯಕ್ತಿಗಳಾಗಿದ್ದು ಜೀನ್ಸ್ ಪ್ಯಾಂಟ್ ಧರಿಸಿ ಟೋಪಿ ಧರಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯ ಪ್ರಭಾರ ಪಿ ಐ ಶಶಿಕುಮಾರ್, ಕಾನೂನು ವಿಭಾಗದ ಈಶ್ವರ್, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಲೋಕೇಶ್, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನೂರಿನಲ್ಲಿ ದರೋಡೆ: ಹನೂರು ಪಟ್ಟಣದ ೧೧ ವಾರ್ಡಿನಲ್ಲಿ ಸೆಪ್ಟೆಂಬರ್ ಹತ್ತರಂದು ಚಿನ್ನ ದೊರೆ, ಧನಲಕ್ಷ್ಮಿ ಎಂಬುವರ ಮನೆಯಲ್ಲಿ 20 ಲಕ್ಷ ನಗದು 308 ಗ್ರಾಂ ಚಿನ್ನ ಕಳ್ಳತನವಾಗಿತ್ತು ಈ ಪ್ರಕರಣವು ಸಹ ಇನ್ನು ತನಿಖಾ ಹಂತದಲ್ಲಿಯೇ ಇದೆ.

ಮಹಿಳೆ ಚಿನ್ನದ ಓಲೆ ದೋಚಿದ್ದ ಅಪರಿಚಿತರು: ಜುಲೈ 31 ರಂದು ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದ ರಾಜಮ್ಮ ಎಂಬುವರು ದೇವನ ಬೀಜಗಳನ್ನು ಸಂಗ್ರಹಣೆ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಜಮೀನು ಸಿಗುತ್ತದೆಯೇ ಎಂದು ಮಾತನಾಡುತ್ತಾ ಏಕಾಏಕಿ ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿಕೊಡುವಂತೆ ಎದುರಿಸಿ ಓಲೆ ದೋಚಿ ಪರಾರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಮೂರು ಪ್ರಕರಣಗಳು ನಡೆದಿದ್ದು, ಎರಡು ಪ್ರಕರಣದಲ್ಲಿ ಚಿನ್ನ ದೋಚಿ, ಇನ್ನೊಂದು ಪ್ರಕರಣದಲ್ಲಿ ಚಿನ್ನ, ನಗದು ದೋಚಿ ಪರಾರಿಯಾಗಿ ರುವ ಘಟನೆಗಳು ತಾಲೂಕು ವ್ಯಾಪ್ತಿಯಲ್ಲಿ ತಲ್ಲಣ ಉಂಟುಮಾಡಿದೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago