ಚಾಮರಾಜನಗರ

ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನ- ಹಣ ಕಳ್ಳತನ

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ.

ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಘಟನೆ ವಿವರ: ಹೊಸದೊಡ್ಡಿ ಗ್ರಾಮದ ಜಗದೀಶ್ ರೆಡ್ಡಿ ರವರ ಪತ್ನಿ ರುಕ್ಮಿಣಿ ಕೌದಳ್ಳಿ ಗ್ರಾಮಕ್ಕೆ ಹಾಲು ಹಾಕಲು ತೆರಳಿದ್ದಾಗ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಜಗದೀಶ್ ರವರನ್ನು ನೀರು ಕೊಡುವಂತೆ ಕೇಳಿದ್ದಾರೆ. ನೀರು ತರಲು ಒಳಗೆ ಹೋಗುತ್ತಿದ್ದಂತೆ ಇಬ್ಬರು ಅಪರಿಚಿತರು ಅವರ ಕೈಕಾಲು, ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ 168 ಗ್ರಾಂ ಚಿನ್ನ ಹಾಗೂ 41,000 ರೂ. ಹಣ ಕಳವು ಮಾಡಿ ಪರಾರಿಯಾಗಿದ್ದಾರೆ. ಜಗದೀಶ್ ರೆಡ್ಡಿ ರವರ ಅಣ್ಣ ಮನೆಗೆ ಬಂದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಗಳನ್ನು ಧರ್ಮ ರೆಡ್ಡಿ ಎಂಬುವರು ನೋಡಿದ್ದು 30 ರಿಂದ 35 ವರ್ಷ ಒಳಗಿನ ವ್ಯಕ್ತಿಗಳಾಗಿದ್ದು ಜೀನ್ಸ್ ಪ್ಯಾಂಟ್ ಧರಿಸಿ ಟೋಪಿ ಧರಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯ ಪ್ರಭಾರ ಪಿ ಐ ಶಶಿಕುಮಾರ್, ಕಾನೂನು ವಿಭಾಗದ ಈಶ್ವರ್, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಲೋಕೇಶ್, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನೂರಿನಲ್ಲಿ ದರೋಡೆ: ಹನೂರು ಪಟ್ಟಣದ ೧೧ ವಾರ್ಡಿನಲ್ಲಿ ಸೆಪ್ಟೆಂಬರ್ ಹತ್ತರಂದು ಚಿನ್ನ ದೊರೆ, ಧನಲಕ್ಷ್ಮಿ ಎಂಬುವರ ಮನೆಯಲ್ಲಿ 20 ಲಕ್ಷ ನಗದು 308 ಗ್ರಾಂ ಚಿನ್ನ ಕಳ್ಳತನವಾಗಿತ್ತು ಈ ಪ್ರಕರಣವು ಸಹ ಇನ್ನು ತನಿಖಾ ಹಂತದಲ್ಲಿಯೇ ಇದೆ.

ಮಹಿಳೆ ಚಿನ್ನದ ಓಲೆ ದೋಚಿದ್ದ ಅಪರಿಚಿತರು: ಜುಲೈ 31 ರಂದು ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದ ರಾಜಮ್ಮ ಎಂಬುವರು ದೇವನ ಬೀಜಗಳನ್ನು ಸಂಗ್ರಹಣೆ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಜಮೀನು ಸಿಗುತ್ತದೆಯೇ ಎಂದು ಮಾತನಾಡುತ್ತಾ ಏಕಾಏಕಿ ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿಕೊಡುವಂತೆ ಎದುರಿಸಿ ಓಲೆ ದೋಚಿ ಪರಾರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಮೂರು ಪ್ರಕರಣಗಳು ನಡೆದಿದ್ದು, ಎರಡು ಪ್ರಕರಣದಲ್ಲಿ ಚಿನ್ನ ದೋಚಿ, ಇನ್ನೊಂದು ಪ್ರಕರಣದಲ್ಲಿ ಚಿನ್ನ, ನಗದು ದೋಚಿ ಪರಾರಿಯಾಗಿ ರುವ ಘಟನೆಗಳು ತಾಲೂಕು ವ್ಯಾಪ್ತಿಯಲ್ಲಿ ತಲ್ಲಣ ಉಂಟುಮಾಡಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

7 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

8 hours ago