ಚಾಮರಾಜನಗರ

ಏ.೧೯ಕ್ಕೆ ‘ಚಿರತೆ ಬಂತು ಚಿರತೆ’ ಸಿನಿವಾ ಬಿಡುಗಡೆ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಅರಕಲವಾಡಿ, ಕಟ್ನವಾಡಿ, ಕೊಂಗಳ್ಳಿ ಬೆಟ್ಟ, ಕೊತ್ತಲವಾಡಿ ಗ್ರಾಮಗಳ ಸುತ್ತಮುತ್ತ, ಚಾಮರಾಜನಗರದಲ್ಲಿ ಚಿತ್ರೀಕರಿಸಲಾಗಿದೆ.

ಚಿರತೆಯ ಗ್ರಾಮಗಳಿಗೆ ದಾಳಿಯಿಡುವುದು ನಂತರ ನಡೆಯುವ ಬೆಳವಣಿಗೆಗಳ ಕುರಿತ ಕಥಾವಸ್ತು ಒಳಗೊಂಡ ಸಿನಿವಾ ಇದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿನಿವಾದಲ್ಲಿ ಜಿಲ್ಲೆಯ ಸ್ಥಳೀಯ ಭಾಷೆ ಬಳಸಿಕೊಳ್ಳಲಾಗಿದೆ. ನಟರಾದ ಸುಂದರ್ ವೀಣಾ, ಮೇಕಪ್ಪ ರಾಮಕೃಷ್ಣ, ಗಿರಿಶಿವಣ್ಣ, ವನಿತಾ, ಸುಜಾತ, ಎ.ಡಿ.ಸಿಲ್ವಾ, ಕೆ.ವೆಂಕಟರಾಜು, ಕಿರಣ್ ಗಿರ್ಗಿ, ಮಹಾಲಿಂಗ ಗಿರ್ಗಿ ಇತರರು ನಟಿಸಿದ್ದಾರೆ. ಎಂದು ತಿಳಿಸಿದರು.
ಈ ಸಿನಿವಾದ ನಾುಂಕ ಪಾರ್ಥಪ್ಪ ಸರ್ಕಾರಿ ನೌಕರಿ ಬಿಟ್ಟು ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುತ್ತಾನೆ.

ಗ್ರಾಮದ ಮುಖಂಡ ವಾದಪ್ಪನ ಎತ್ತಿನ ಮೇಲೆ ಚಿರತೆ ದಾಳಿ ವಾಡಿ ಗಾಯಗೊಳಿಸುತ್ತದೆ. ಪಾರ್ಥಪ್ಪನ ಬಳಿಯಿದ್ದ ಪರವಾನಗಿ ಪಡೆದಿರುವ ಬಂದೂಕಿನಿಂದ ಚಿರತೆ ಕೊಲ್ಲಬೇಕು ಎಂದು ವಾದಪ್ಪ ಒತ್ತಾಯ ಮಾಡುತ್ತಾನೆ. ಆದರೆ, ವನ್ಯಪ್ರಾಣಿ ಸಂರಕ್ಷಣಾ ಕಾನೂನು ಅರಿವು ಇರುವ ಪಾರ್ಥಪ್ಪ ಚಿರತೆ ಹತ್ಯೆಗೆ ಒಪ್ಪುವುದಿಲ್ಲ.

ಆಗ ಇಡೀ ಗ್ರಾಮ ಚಿರತೆುಂನ್ನು ಹತ್ಯೆ ವಾಡಬೇಕೆಂದು ಪಾರ್ಥಪ್ಪನ ಮೇಲೆ ಒತ್ತಡ ಹೇರುತ್ತಾರೆ. ಚಿರತೆಯನ್ನು ಸಾಯಿಸಲಾಗುವುದೇ ಅಥವಾ ಬದುಕಿಸಲಾಗುವುದೇ ಎಂಬುದು ಸಿನಿವಾದ ಕ್ಲೈವ್ಯಾಕ್ಸ್ ಆಗಿದೆ ಎಂದು ತಿಳಿಸಿದರು.

ನಿರ್ಮಾಪಕ ಜಗದೀಶ್ ಮಲ್ನಾಡ್, ರಂಗಕರ್ಮಿ ಕೆ.ವೆಂಕಟರಾಜು, ಕಲಾವಿದರಾದ ಎ.ಡಿ.ಸಿಲ್ವಾ, ಕಿರಣ್ ಗಿರ್ಗಿ, ಮಹಾಲಿಂಗಗಿರ್ಗಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

2 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

3 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

3 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

3 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

3 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

3 hours ago