ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್ ಅಧಿಕಾರಿಗಳು ಬಂಧಿಸಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ಚಿರತೆ ಸಾವಿಗೆ ವಿಷವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು.
ಅನುಮಾನದ ಹಿನ್ನೆಲೆಯಲ್ಲಿ ದೊರೆಸ್ವಾಮಿಯನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ. ಚಿರತೆಯು ಬೇಟೆಯಾಡಿದ್ದ ಮಾಂಸಕ್ಕೆ ವಿಷ ಬೆರೆಸಿ ಜಾನುವಾರುಗಳ ಸಾವಿಗೆ ಸೇಡು ತೀರಿಸಿಕೊಂಡಿರುವುದಾಗಿ ದೊರೆಸ್ವಾಮಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಬಂಧಿತ ಆರೋಪಿ ದೊರೆಸ್ವಾಮಿಯ ಎರಡು ಹಸು, ನಾಲ್ಕು ಕುರಿಯನ್ನು ಚಿರತೆಯು ತಿಂದು ತೇಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…