ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್ ಅಧಿಕಾರಿಗಳು ಬಂಧಿಸಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ಚಿರತೆ ಸಾವಿಗೆ ವಿಷವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು.
ಅನುಮಾನದ ಹಿನ್ನೆಲೆಯಲ್ಲಿ ದೊರೆಸ್ವಾಮಿಯನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ. ಚಿರತೆಯು ಬೇಟೆಯಾಡಿದ್ದ ಮಾಂಸಕ್ಕೆ ವಿಷ ಬೆರೆಸಿ ಜಾನುವಾರುಗಳ ಸಾವಿಗೆ ಸೇಡು ತೀರಿಸಿಕೊಂಡಿರುವುದಾಗಿ ದೊರೆಸ್ವಾಮಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಬಂಧಿತ ಆರೋಪಿ ದೊರೆಸ್ವಾಮಿಯ ಎರಡು ಹಸು, ನಾಲ್ಕು ಕುರಿಯನ್ನು ಚಿರತೆಯು ತಿಂದು ತೇಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…