ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್ ಅಧಿಕಾರಿಗಳು ಬಂಧಿಸಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದ್ದು, ಚಿರತೆ ಸಾವಿಗೆ ವಿಷವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು.
ಅನುಮಾನದ ಹಿನ್ನೆಲೆಯಲ್ಲಿ ದೊರೆಸ್ವಾಮಿಯನ್ನು ವಿಚಾರಿಸಿದಾಗ ಸತ್ಯಾಂಶ ಹೊರಬಂದಿದೆ. ಚಿರತೆಯು ಬೇಟೆಯಾಡಿದ್ದ ಮಾಂಸಕ್ಕೆ ವಿಷ ಬೆರೆಸಿ ಜಾನುವಾರುಗಳ ಸಾವಿಗೆ ಸೇಡು ತೀರಿಸಿಕೊಂಡಿರುವುದಾಗಿ ದೊರೆಸ್ವಾಮಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಬಂಧಿತ ಆರೋಪಿ ದೊರೆಸ್ವಾಮಿಯ ಎರಡು ಹಸು, ನಾಲ್ಕು ಕುರಿಯನ್ನು ಚಿರತೆಯು ತಿಂದು ತೇಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…