Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ನೀರಿನ ಸುಳಿಗೆ ಸಿಲುಕಿ ಓರ್ವ ಸಾವು ; ಹೊಗೇನಕಲ್‌ ಫಾಲ್ಸ್‌ನಲ್ಲಿ ಘಟನೆ

ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಜರುಗಿದೆ.

ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ನಿವಾಸಿ, ಮಡಿಲು ಹೋಟೆಲ್ ಮಾಲೀಕ ಲಿಂಗರಾಜು (42 )ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಘಟನೆಯ ವಿವರ ;
ಗುಂಬಳ್ಳಿ ಗ್ರಾಮದ ನಿವಾಸಿ ಲಿಂಗರಾಜು, ಪತ್ನಿ ಶೃತಿ ಮಕ್ಕಳು ಹಾಗೂ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಹೊಗೇನಕಲ್ ಫಾಲ್ಸ್ ಗೆ ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ನೀರಿನಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ರಭಸಕ್ಕೆ ಲಿಂಗರಾಜು ಸುಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಕುಟುಂಬಸ್ಥರನ್ನು ನುರಿತ ಈಜುಗಾರರು ರಕ್ಷಣೆ ಮಾಡಿದ್ದಾರೆ.

ನೀರಿನ ರಭಸಕ್ಕೆ ಸುಳಿಗೆ ಸಿಲುಕಿ ಲಿಂಗರಾಜುರವರ ಶವ ನೀರಿನಲ್ಲಿ ಮುಳುಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನುರಿತ ಈಜುಗಾರರು ಶವ ಪತ್ತೆಯಲ್ಲಿ ತೊಡಗಿದ್ದಾರೆ. ಭಾನುವಾರ ಸಂಜೆ 7 ಗಂಟೆಯವರೆಗೂ ಶವ ಪತ್ತೆಯಾಗಿಲ್ಲ. ನುರಿತ ಈಜುಗಾರರ ಜೊತೆಗೆ ಅಗ್ನಿಶಾಮಕ ದಳೆದ ಸಿಬ್ಬಂದಿ ವರ್ಗದವರಿಗೂ ಮಾಹಿತಿ ನೀಡಲಾಗಿದ್ದು ಶವ ಪತ್ತೆ ಕಾರ್ಯ ಮುಂದುವರೆದಿದೆ.

ಲಿಂಗರಾಜುರವರು ನೀರಿನ ಸುಳಿಗೆ ಸಿಲುಕಿ ಮುಳುಗುತ್ತಿದ್ದಂತೆ ಪತ್ನಿ ಹಾಗೂ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತು. ಸ್ಥಳೀಯ ನಿವಾಸಿಗಳು ಪತ್ನಿಯನ್ನು ಸಂತೈಸಿದ್ದಾರೆ.

Tags:
error: Content is protected !!