ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಒಂದು ಸಾವಿರ ತಟ್ಟೆ ಹಸ್ತಾಂತರ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಮೈಸೂರಿನ ಕೆಜಿ ಕೊಪ್ಪಲು ಗ್ರಾಮದ ಶಿವುರವರು ಒಂದು ಸಾವಿರ ತಟ್ಟೆಯನ್ನು ಪ್ರಾಧಿಕಾರದ ಕಾರ್ಯದರ್ಶಿ ರಘುರವರಿಗೆ ಹಸ್ತಾಂತರ ಮಾಡಿದರು.

ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ನೂರಾರು ದಾನಿಗಳು ಅವರದ್ದೇ ಆದ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಹಲವಾರು ಉದ್ಯಮಿಗಳು, ಗುತ್ತಿಗೆದಾರರು ವಿವಿಧ ಬಗೆಯ ಸಹಕಾರ ನೀಡಿದ್ದಾರೆ. ಯುವ ಉದ್ಯಮಿ ಶಿವುರವರು ತಟ್ಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಭಕ್ತರಿಂದ ಬರುವ ಆದಾಯ ಹಾಗೂ ದಾನಿಗಳ ಸಹಕಾರದಿಂದ ಇನ್ನಷ್ಟು ಅಭಿವೃದ್ಧಿ ಮಾಡಲು ಕ್ರಮ ವಹಿಸಲಾಗಿದೆ ಎಂದರು.

ಯುವ ಉದ್ಯಮಿ ಶಿವು ಮಾತನಾಡಿ, ತಾಲೂಕಿನ ಧಾರ್ಮಿಕ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಲಕ್ಷಾಂತರ ಜನರು ಹಾಗೂ ದಿನನಿತ್ಯ ಸಾವಿರಾರು ಮಂದಿ ದಾಸೋಹ ಭವನಕ್ಕೆ ಆಗಮಿಸುವ ಹಿನ್ನೆಲೆ ನಮ್ಮ ಕುಟುಂಬದ ವತಿಯಿಂದ ಜನರ ಅನುಕೂಲಕ್ಕಾಗಿ 1 ಸಾವಿರ ತಟ್ಟೆಯನ್ನು ಹರಕೆ ರೂಪದಲ್ಲಿ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಸ್ನೇಹಿತರು ಹಾಗೂ ಕುಟುಂಬಸ್ಥರ ಸಹಯೋಗದೊಂದಿಗೆ 5 ಸಾವಿರ ತಟ್ಟೆ ನೀಡಲು ತಯಾರಿ ಮಾಡಿಕೊಂಡಿದ್ದೇವೆ ಎಂದರು.

ಇನ್ನು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಉಮಾ ಹೆಸರಿನ ಆನೆಗೆ ಸ್ವಚ್ಛ (ಸ್ಥಾನ)ಮಾಡಲು ವಿನೂತನ ಮಾದರಿಯ ಯಂತ್ರವೊಂದನ್ನು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರಕ್ಕೆ ನಮ್ಮ ಕೈಲಾಗುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಈ ವೇಳೆ ಮೈಸೂರಿನ ಕೆ.ಜಿ ಕೊಪ್ಪಲಿನ ಮುಖಂಡರುಗಳು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago