ಚಾಮರಾಜನಗರ

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಸಾಮೂಹಿಕ ಮನವಿ ಸಲ್ಲಿಸಿದ್ದಾರೆ.

ಸಫಾರಿ ಪರಿಸರ ವಿರೋಧಿ ಎಂದು ಆಕ್ಷೇಪಿಸಿರುವ ರೈತ ಮುಖಂಡರು, “ಸಫಾರಿ ಪುನರಾರಂಭ ಮಾಡಬಾರದು” ಎಂದು ಒತ್ತಾಯಿಸಿ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ತಾಲೂಕಿನ ಹಂಗಳ ಹೋಬಳಿಯ ಕನ್ನೇಗಾಲ, ಹುಂಡೀಪುರ, ಶಿವಪುರ, ಬೊಮ್ಮಲಾಪುರ, ಮಂಗಲ, ಬೇರಂಬಾಡಿ, ತೆರಕಣಾಂಬಿ ಹೋಬಳಿ ವ್ಯಾಪ್ತಿಯ ಕೊಡಸೋಗೆ, ಕೆಲಸೂರು, ಬೊಮ್ಮನಹಳ್ಳಿ, ವಡ್ಡಗೆರೆ, ಶಿಂಡನಪುರ, ಕುಂದಕೆರೆ ಬೇಗೂರು ಹೋಬಳಿಗೆ ಬರುವ ಕೋಟೆಕೆರೆ, ರಾಘವಾಪುರ, ಹೊರೆಯಾಲ, ನಿಟ್ರೆ, ಮಾದಾಪಟ್ಟಣ, ಆಲತ್ತೂರು, ಕಬ್ಬಹಳ್ಳಿ ಹಾಗೂ ಕಸಬಾ ಹೋಬಳಿಯ ಭೀಮನಬೀಡು, ಕೂತನೂರು, ಮಡಹಳ್ಳಿ, ಬರಗಿ, ಮೂಖಹಳ್ಳಿ, ಅಣ್ಣೂರುಕೇರಿ, ವೀರನಪುರ ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಮನವಿ ಸಲ್ಲಿಸಿದ್ದಾರೆ.

ರೈತ ಮುಖಂಡರು ಹೇಳಿದ್ದು…
“ಸಫಾರಿ ವೀಕ್ಷಣೆಗೆ ಹೆಚ್ಚಿನ ಮಂದಿ ಹೊರಗಿನವರು ಬರುತ್ತಾರೆ. ಆದರೆ ಸಫಾರಿಯಿಂದ ರೈತರು ಮತ್ತು ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಕಾಡಿನೊಳಗೆ ಬಸ್‌ ಹಾಗೂ ಜೀಪ್‌ಗಳ ಸಂಚಾರದಿಂದ ವಾಯು ಮಾಲಿನ್ಯವಾಗುತ್ತದೆ. ಸ್ವಚ್ಛಂದವಾಗಿ ಓಡಾಡುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಮನುಷ್ಯನನ್ನು ನೋಡಿ ಪ್ರಾಣಿಗಳು ಗಾಬರಿಗೊಂಡು ಓಡಿಹೋಗುತ್ತವೆ. ಕಾಡು ಕಾಡಾಗೇ ಇರಬೇಕು. ಮಾನವನ ಹಸ್ತಕ್ಷೇಪ ಇರಬಾರದು. ಸಫಾರಿಯಿಂದ ಕಾಡಿನ ಅಸಮತೋಲನವಾಗುತ್ತದೆ.”

ಇನ್ನೂ ಮುಂದುವರಿಸಿ ಮಾತನಾಡಿ, “ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಹಣ ಮಾಡಲು ಅರಣ್ಯದೊಳಗೆ ಅತಿಕ್ರಮಣ ಮಾಡಿ ರೆಸಾರ್ಟ್‌, ಬಾರ್‌ಗಳನ್ನು ಮಾಡಿಕೊಂಡಿದ್ದಾರೆ. ಕಾಡು ಎಲ್ಲರ ಸ್ವತ್ತಾಗಿರುವ ಕಾರಣ ರೈತರ ಅಭಿಪ್ರಾಯ ಪಡೆದುಕೊಳ್ಳಬೇಕು. ಕಾಡನ್ನು ಉಳಿಸುವವರು ರೈತರು ಹಾಗೂ ಗಿರಿಜನರೇ ಹೊರತು, ಯಾವುದೇ ಇಲಾಖೆಯವರಲ್ಲ. ಕಾಡಿನೊಳಗೆ ಇರುವ ಎಲ್ಲಾ ರೆಸಾರ್ಟ್‌, ಹೋಮ್‌ಸ್ಟೇಗಳ ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತಕ್ಷಣ ಸರ್ಕಾರ ವಶಪಡಿಸಿಕೊಳ್ಳಬೇಕು. ಪ್ರವಾಸೋದ್ಯಮಕ್ಕೆ ಬೇರೆ ದಾರಿಗಳಿಗೆ. ಕಾಡಿನೊಳಗೆ ಪ್ರವಾಸೋದ್ಯಮ ಸಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ಸಫಾರಿ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಈ ಮನವಿ ಸಲ್ಲಿಕೆ ವೇಳೆ ಹಾಜರಿದ್ದರು.

ಈ ಸಂಬಂಧ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಪಿಡಿಒಗೆ ವಿಶೇಷವಾಗಿ ಮನವಿ ಸಲ್ಲಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

38 mins ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

1 hour ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

1 hour ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

1 hour ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

2 hours ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

2 hours ago