ಚಾಮರಾಜನಗರ

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಸಾಮೂಹಿಕ ಮನವಿ ಸಲ್ಲಿಸಿದ್ದಾರೆ.

ಸಫಾರಿ ಪರಿಸರ ವಿರೋಧಿ ಎಂದು ಆಕ್ಷೇಪಿಸಿರುವ ರೈತ ಮುಖಂಡರು, “ಸಫಾರಿ ಪುನರಾರಂಭ ಮಾಡಬಾರದು” ಎಂದು ಒತ್ತಾಯಿಸಿ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ತಾಲೂಕಿನ ಹಂಗಳ ಹೋಬಳಿಯ ಕನ್ನೇಗಾಲ, ಹುಂಡೀಪುರ, ಶಿವಪುರ, ಬೊಮ್ಮಲಾಪುರ, ಮಂಗಲ, ಬೇರಂಬಾಡಿ, ತೆರಕಣಾಂಬಿ ಹೋಬಳಿ ವ್ಯಾಪ್ತಿಯ ಕೊಡಸೋಗೆ, ಕೆಲಸೂರು, ಬೊಮ್ಮನಹಳ್ಳಿ, ವಡ್ಡಗೆರೆ, ಶಿಂಡನಪುರ, ಕುಂದಕೆರೆ ಬೇಗೂರು ಹೋಬಳಿಗೆ ಬರುವ ಕೋಟೆಕೆರೆ, ರಾಘವಾಪುರ, ಹೊರೆಯಾಲ, ನಿಟ್ರೆ, ಮಾದಾಪಟ್ಟಣ, ಆಲತ್ತೂರು, ಕಬ್ಬಹಳ್ಳಿ ಹಾಗೂ ಕಸಬಾ ಹೋಬಳಿಯ ಭೀಮನಬೀಡು, ಕೂತನೂರು, ಮಡಹಳ್ಳಿ, ಬರಗಿ, ಮೂಖಹಳ್ಳಿ, ಅಣ್ಣೂರುಕೇರಿ, ವೀರನಪುರ ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಮನವಿ ಸಲ್ಲಿಸಿದ್ದಾರೆ.

ರೈತ ಮುಖಂಡರು ಹೇಳಿದ್ದು…
“ಸಫಾರಿ ವೀಕ್ಷಣೆಗೆ ಹೆಚ್ಚಿನ ಮಂದಿ ಹೊರಗಿನವರು ಬರುತ್ತಾರೆ. ಆದರೆ ಸಫಾರಿಯಿಂದ ರೈತರು ಮತ್ತು ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಕಾಡಿನೊಳಗೆ ಬಸ್‌ ಹಾಗೂ ಜೀಪ್‌ಗಳ ಸಂಚಾರದಿಂದ ವಾಯು ಮಾಲಿನ್ಯವಾಗುತ್ತದೆ. ಸ್ವಚ್ಛಂದವಾಗಿ ಓಡಾಡುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಮನುಷ್ಯನನ್ನು ನೋಡಿ ಪ್ರಾಣಿಗಳು ಗಾಬರಿಗೊಂಡು ಓಡಿಹೋಗುತ್ತವೆ. ಕಾಡು ಕಾಡಾಗೇ ಇರಬೇಕು. ಮಾನವನ ಹಸ್ತಕ್ಷೇಪ ಇರಬಾರದು. ಸಫಾರಿಯಿಂದ ಕಾಡಿನ ಅಸಮತೋಲನವಾಗುತ್ತದೆ.”

ಇನ್ನೂ ಮುಂದುವರಿಸಿ ಮಾತನಾಡಿ, “ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಹಣ ಮಾಡಲು ಅರಣ್ಯದೊಳಗೆ ಅತಿಕ್ರಮಣ ಮಾಡಿ ರೆಸಾರ್ಟ್‌, ಬಾರ್‌ಗಳನ್ನು ಮಾಡಿಕೊಂಡಿದ್ದಾರೆ. ಕಾಡು ಎಲ್ಲರ ಸ್ವತ್ತಾಗಿರುವ ಕಾರಣ ರೈತರ ಅಭಿಪ್ರಾಯ ಪಡೆದುಕೊಳ್ಳಬೇಕು. ಕಾಡನ್ನು ಉಳಿಸುವವರು ರೈತರು ಹಾಗೂ ಗಿರಿಜನರೇ ಹೊರತು, ಯಾವುದೇ ಇಲಾಖೆಯವರಲ್ಲ. ಕಾಡಿನೊಳಗೆ ಇರುವ ಎಲ್ಲಾ ರೆಸಾರ್ಟ್‌, ಹೋಮ್‌ಸ್ಟೇಗಳ ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತಕ್ಷಣ ಸರ್ಕಾರ ವಶಪಡಿಸಿಕೊಳ್ಳಬೇಕು. ಪ್ರವಾಸೋದ್ಯಮಕ್ಕೆ ಬೇರೆ ದಾರಿಗಳಿಗೆ. ಕಾಡಿನೊಳಗೆ ಪ್ರವಾಸೋದ್ಯಮ ಸಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ಸಫಾರಿ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಈ ಮನವಿ ಸಲ್ಲಿಕೆ ವೇಳೆ ಹಾಜರಿದ್ದರು.

ಈ ಸಂಬಂಧ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಪಿಡಿಒಗೆ ವಿಶೇಷವಾಗಿ ಮನವಿ ಸಲ್ಲಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

12 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

21 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

21 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

21 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

21 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

21 hours ago