ಚಾಮರಾಜನಗರ

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಸಾಮೂಹಿಕ ಮನವಿ ಸಲ್ಲಿಸಿದ್ದಾರೆ.

ಸಫಾರಿ ಪರಿಸರ ವಿರೋಧಿ ಎಂದು ಆಕ್ಷೇಪಿಸಿರುವ ರೈತ ಮುಖಂಡರು, “ಸಫಾರಿ ಪುನರಾರಂಭ ಮಾಡಬಾರದು” ಎಂದು ಒತ್ತಾಯಿಸಿ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ತಾಲೂಕಿನ ಹಂಗಳ ಹೋಬಳಿಯ ಕನ್ನೇಗಾಲ, ಹುಂಡೀಪುರ, ಶಿವಪುರ, ಬೊಮ್ಮಲಾಪುರ, ಮಂಗಲ, ಬೇರಂಬಾಡಿ, ತೆರಕಣಾಂಬಿ ಹೋಬಳಿ ವ್ಯಾಪ್ತಿಯ ಕೊಡಸೋಗೆ, ಕೆಲಸೂರು, ಬೊಮ್ಮನಹಳ್ಳಿ, ವಡ್ಡಗೆರೆ, ಶಿಂಡನಪುರ, ಕುಂದಕೆರೆ ಬೇಗೂರು ಹೋಬಳಿಗೆ ಬರುವ ಕೋಟೆಕೆರೆ, ರಾಘವಾಪುರ, ಹೊರೆಯಾಲ, ನಿಟ್ರೆ, ಮಾದಾಪಟ್ಟಣ, ಆಲತ್ತೂರು, ಕಬ್ಬಹಳ್ಳಿ ಹಾಗೂ ಕಸಬಾ ಹೋಬಳಿಯ ಭೀಮನಬೀಡು, ಕೂತನೂರು, ಮಡಹಳ್ಳಿ, ಬರಗಿ, ಮೂಖಹಳ್ಳಿ, ಅಣ್ಣೂರುಕೇರಿ, ವೀರನಪುರ ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಮನವಿ ಸಲ್ಲಿಸಿದ್ದಾರೆ.

ರೈತ ಮುಖಂಡರು ಹೇಳಿದ್ದು…
“ಸಫಾರಿ ವೀಕ್ಷಣೆಗೆ ಹೆಚ್ಚಿನ ಮಂದಿ ಹೊರಗಿನವರು ಬರುತ್ತಾರೆ. ಆದರೆ ಸಫಾರಿಯಿಂದ ರೈತರು ಮತ್ತು ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಕಾಡಿನೊಳಗೆ ಬಸ್‌ ಹಾಗೂ ಜೀಪ್‌ಗಳ ಸಂಚಾರದಿಂದ ವಾಯು ಮಾಲಿನ್ಯವಾಗುತ್ತದೆ. ಸ್ವಚ್ಛಂದವಾಗಿ ಓಡಾಡುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಮನುಷ್ಯನನ್ನು ನೋಡಿ ಪ್ರಾಣಿಗಳು ಗಾಬರಿಗೊಂಡು ಓಡಿಹೋಗುತ್ತವೆ. ಕಾಡು ಕಾಡಾಗೇ ಇರಬೇಕು. ಮಾನವನ ಹಸ್ತಕ್ಷೇಪ ಇರಬಾರದು. ಸಫಾರಿಯಿಂದ ಕಾಡಿನ ಅಸಮತೋಲನವಾಗುತ್ತದೆ.”

ಇನ್ನೂ ಮುಂದುವರಿಸಿ ಮಾತನಾಡಿ, “ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಹಣ ಮಾಡಲು ಅರಣ್ಯದೊಳಗೆ ಅತಿಕ್ರಮಣ ಮಾಡಿ ರೆಸಾರ್ಟ್‌, ಬಾರ್‌ಗಳನ್ನು ಮಾಡಿಕೊಂಡಿದ್ದಾರೆ. ಕಾಡು ಎಲ್ಲರ ಸ್ವತ್ತಾಗಿರುವ ಕಾರಣ ರೈತರ ಅಭಿಪ್ರಾಯ ಪಡೆದುಕೊಳ್ಳಬೇಕು. ಕಾಡನ್ನು ಉಳಿಸುವವರು ರೈತರು ಹಾಗೂ ಗಿರಿಜನರೇ ಹೊರತು, ಯಾವುದೇ ಇಲಾಖೆಯವರಲ್ಲ. ಕಾಡಿನೊಳಗೆ ಇರುವ ಎಲ್ಲಾ ರೆಸಾರ್ಟ್‌, ಹೋಮ್‌ಸ್ಟೇಗಳ ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತಕ್ಷಣ ಸರ್ಕಾರ ವಶಪಡಿಸಿಕೊಳ್ಳಬೇಕು. ಪ್ರವಾಸೋದ್ಯಮಕ್ಕೆ ಬೇರೆ ದಾರಿಗಳಿಗೆ. ಕಾಡಿನೊಳಗೆ ಪ್ರವಾಸೋದ್ಯಮ ಸಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ಸಫಾರಿ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಈ ಮನವಿ ಸಲ್ಲಿಕೆ ವೇಳೆ ಹಾಜರಿದ್ದರು.

ಈ ಸಂಬಂಧ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಪಿಡಿಒಗೆ ವಿಶೇಷವಾಗಿ ಮನವಿ ಸಲ್ಲಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

50 mins ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

60 mins ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

2 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 hours ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago