ಚಾಮರಾಜನಗರ

ಆಕ್ಸಿಜನ್ ದುರಂತ : ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಸಂತ್ರಸ್ತೆಯರಿಂದ ಪತ್ರ

ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರು ವೇತನ , ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ನೆಪ ಮಾತ್ರಕ್ಕೆ ಒಂಭತ್ತು ಮಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರಿ ನೀಡಲಾಗಿದೆ. ಆದರೆ ಯಾವುದೇ ಪ್ರತಿ ನೀಡದೆ ಬರಿ ಮೌಖಿಕ ಆದೇಶದ ಮೇಲೆ ಜಿಲ್ಲಾಡಳಿತ ಕೆಲಸ ನೀಡಿದೆ . ೩ ತಿಂಗಳು ವೇತನ ನೀಡಿ ೪ ತಿಂಗಳು ವೇತನ ಬಾಕಿ ಉಳಿಸಿಕೊಂಡಿದೆ. ಅತ್ತ ಕೂಲಿ ಕೆಲಸಕ್ಕೂ ಹೋಗುವುದಕ್ಕೆ ಆಗುತ್ತಿಲ್ಲ. ಇತ್ತ ಹೊರ ಗುತ್ತಿಗೆ ಕೆಲಸ ಮಾಡಲಾಗದೆ ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ನಮಗೆ ದಯಾಮರಣ ಕರುಣಿಸಿ ಎಂದು ಸಂತ್ರಸ್ತೆಯರು ಕಣ್ಣೀರು ಹಾಕಿದ್ದಾರೆ.

೨೦೨೧ ರ ಮೇ ೨ ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ೩೬ ಮಂದಿ ಸಾವನ್ನಪ್ಪಿದ್ದರು. ೨೦೨೨ ರ ಸೆಪ್ಟೆಂಬರ್‌ ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ಪಾದಯಾತ್ರೆಗೆ ಗುಂಡ್ಲುಪೇಟೆಗೆ ಬಂದಾಗ ಸಂತ್ರಸ್ಥರೊಂದಿಗೆ ಸಂವಾದ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರವು ಸಂತ್ರಸ್ತರ ಕಡೆ ತಿರುಗಿಯೂ ನೋಡಿಲ್ಲ.  ಸಂತ್ರಸ್ತೆಯರ ಹೋರಾಟದ ನಂತರ ಕೇವಲ ೯ ಮಂದಿಗೆ ಜಿಲ್ಲಾಡಳಿತ ಐದು ತಿಂಗಳ ಹಿಂದೆ ಹೊರಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್‌ ನೌಕರಿ ನೀಡಿತು. ಆದರೆ ಫೆಬ್ರವರಿ ತಿಂಗಳು ಹೊರತು ಪಡಿಸಿದರೆ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಉದ್ಯೋಗ ಭದ್ರತೆಯನ್ನು ಸಹ ನೀಡಿಲ್ಲ. ಕೇವಲ ಮೌಖಿಕ ಸೂಚನೆ ಮೇರೆಗೆ ವಿವಿಧ ಇಲಾಖೆಯ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸಂತ್ರಸ್ತರು ಕೆಲಸ ಮಾಡುತ್ತಿದ್ದಾರೆ. ಇನ್ನಾದ್ರೂ ಸರ್ಕಾರ ಎಚ್ಚೆತ್ತು ಕೊಂಡು ಸಂತ್ರಸ್ತೆಯರಿಗೆ ಖಾಯಂ ಉದ್ಯೋಗ ನೀಡುತ್ತಾರಾ ಎಂಬುವುದನ್ನ ಕಾದುನೋಡಬೇಕಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago