ಚಾಮರಾಜನಗರ

ಆಕ್ಸಿಜನ್‌ ದುರಂತ ಸಂತ್ರಸ್ತರು: ಕಾಂಗ್ರೆಸ್ ನೀಡಿದ್ದ ಹಣ ವಾಪಾಸ್ ಕೊಡಲು ತೀರ್ಮಾನ

ಚಾಮರಾಜನಗರ : ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದೊರಕದೆ ಮೃ*ತಪಟ್ಟ ಕುಟುಂಬಗಳಿಗೆ ಸರಕಾರಿ ನೌಕರಿ ನೀಡುವ ಬಗ್ಗೆ ಮಲೆ ಮಹದೇಶ್ವರ ಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗದ ಕಾರಣ ನೊಂದುಕೊಂಡಿರುವ 36 ಸಂತ್ರಸ್ತ ಕುಟುಂಬದವರು, ಕಾಂಗ್ರೆಸ್‌ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೀಡಿದ್ದ ತಲಾ 1 ಲಕ್ಷ ರೂ. ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ.

“ಭಾರತ್‌ ಜೋಡೋ’ ಯಾತ್ರೆ ವೇಳೆ ಗುಂಡ್ಲುಪೇಟೆ ಯಲ್ಲಿ ಸಂತ್ರಸ್ತ ಕುಟುಂಬದವರನ್ನೆಲ್ಲ ಭೇಟಿ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ 36 ಕುಟುಂಬದ ತಲಾ ಒಬ್ಬರಿಗೆ ಸರಕಾರಿ ನೌಕರಿ ಹಾಗೂ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದರು.

ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಸಂತ್ರಸ್ತ ಕುಟುಂಬದವರಿಗೆ ಸರಕಾರಿ ಉದ್ಯೋಗ ನೀಡಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಚರ್ಚಿಸುವುದಾಗಿ ಈ ಹಿಂದೆ ಹೇಳಿದ್ದರು. ಗುರುವಾರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಕ್ಸಿಜನ್‌ ಸಂತ್ರಸ್ತರ ನೆರವಿಗೆ ಸರಕಾರ ಹೆಚ್ಚಿನ ಪರಿಹಾರ ನೀಡಬಹುದು. ಸರಕಾರಿ ಉದ್ಯೋಗ ನೀಡಲು ವಿಶೇಷ ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸ್ಪಂದನೆ ದೊರೆತಿಲ್ಲ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago